ಮೈಸೂರು: ದೇವಾಲಯಗಳ ನೆಲಸಮ ವಿಚಾರವಾಗಿ ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ಅದರ ಸಾಧಕ ಬಾಧಕಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಸದ್ಯಕ್ಕೆ ದೇವಾಲಯ ನೆಲಸಮ ವಿಚಾರಕ್ಕೆ ಸಿಎಂ ತಾತ್ಕಾಲಿಕ ತಡೆ ನೀಡಿದ್ದಾರೆ. ಎರಡು ದಿನಗಳಲ್ಲಿ ಈ ವಿಚಾರ ತೀರ್ಮಾನ ಆಗಲಿದೆ ಎಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಹುಚ್ಚಗಣಿ ದೇಗುಲ ನೆಲಸಮ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಇದು ಸಿಎಂ ಹಾಗೂ ಕಂದಾಯ ಸಚಿವರ ಗಮನಕ್ಕೆ ಬಂದಿದೆ. ಜಿಲ್ಲಾಡಳಿತಕ್ಕೆ ಸರ್ಕಾರ ನೊಟೀಸ್ ನೀಡಿದೆ. ನೊಟೀಸ್ ಗೆ ಉತ್ತರ ಬಂದ ಬಳಿಕ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವ ವಿಚಾರವನ್ನು ಸಿಎಂ ನಿರ್ಧರಿಸುತ್ತಾರೆ ಎಂದರು.
ದೇಗುಲ ನೆಲಸಮ ವಿರೋಧಿಸಿ ಹಿಂದೂ ಪರ ಸಂಘಟನೆಗಳಿಂದ ಎಲ್ಲಾ ಕಡೆ ಪ್ರತಿಭಟನೆ, ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸೋಮಶೇಖರ್, ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಪೊಲೀಸರು ಪರಿಸ್ಥಿತಿ ಮೇಲೆ ನಿಗಾ ಇಟ್ಟಿದ್ದಾರೆ. ಈ ಬೆಳವಣಿಗೆಗಳಿಂದ ಸರ್ಕಾರಕ್ಕೆ ಮುಜುಗರ ಉಂಟಾಗುವ ಪ್ರಶ್ನೆಯೇ ಬರಲ್ಲ. ಎರಡು ದಿನಗಳಲ್ಲಿ ಎಲ್ಲವೂ ಸುಖಾಂತ್ಯ ಆಗಲಿದೆ ಎಂದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]