Featured

ದೇವಸ್ಥಾನ ನೆಲಸಮ ವಿಚಾರದ ಬಗ್ಗೆ ಎರಡು ದಿನದಲ್ಲಿ ತೀರ್ಮಾನ: ಸಚಿವ ಸೋಮಶೇಖರ್ -Vishwanews24

ದೇವಸ್ಥಾನ ನೆಲಸಮ ವಿಚಾರದ ಬಗ್ಗೆ ಎರಡು ದಿನದಲ್ಲಿ ತೀರ್ಮಾನ: ಸಚಿವ ಸೋಮಶೇಖರ್ -Vishwanews24

ಮೈಸೂರು: ದೇವಾಲಯಗಳ ನೆಲಸಮ‌ ವಿಚಾರವಾಗಿ ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ಅದರ ಸಾಧಕ‌ ಬಾಧಕಗಳನ್ನು ಸಂಪುಟ‌ ಸಭೆಯಲ್ಲಿ ಚರ್ಚಿಸಲಾಗುವುದು. ಸದ್ಯಕ್ಕೆ ದೇವಾಲಯ ನೆಲಸಮ ವಿಚಾರಕ್ಕೆ ಸಿಎಂ ತಾತ್ಕಾಲಿಕ‌ ತಡೆ ನೀಡಿದ್ದಾರೆ. ಎರಡು ದಿನಗಳಲ್ಲಿ ಈ ವಿಚಾರ ತೀರ್ಮಾನ ಆಗಲಿದೆ ಎಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.‌ ಸೋಮಶೇಖರ್ ಹೇಳಿದರು.

ಹುಚ್ಚಗಣಿ ದೇಗುಲ‌ ನೆಲಸಮ‌ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಇದು ಸಿಎಂ ಹಾಗೂ ಕಂದಾಯ ಸಚಿವರ ಗಮನಕ್ಕೆ ಬಂದಿದೆ. ಜಿಲ್ಲಾಡಳಿತಕ್ಕೆ ಸರ್ಕಾರ‌ ನೊಟೀಸ್ ನೀಡಿದೆ. ನೊಟೀಸ್ ಗೆ ಉತ್ತರ ಬಂದ ಬಳಿಕ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವ ವಿಚಾರವನ್ನು ಸಿಎಂ ನಿರ್ಧರಿಸುತ್ತಾರೆ ಎಂದರು.

ದೇಗುಲ‌ ನೆಲಸಮ‌ ವಿರೋಧಿಸಿ ಹಿಂದೂ ಪರ ಸಂಘಟನೆಗಳಿಂದ ಎಲ್ಲಾ ಕಡೆ ಪ್ರತಿಭಟನೆ, ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸೋಮಶೇಖರ್, ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಪೊಲೀಸರು ಪರಿಸ್ಥಿತಿ ಮೇಲೆ ನಿಗಾ ಇಟ್ಟಿದ್ದಾರೆ. ಈ ಬೆಳವಣಿಗೆಗಳಿಂದ ಸರ್ಕಾರಕ್ಕೆ ಮುಜುಗರ ಉಂಟಾಗುವ ಪ್ರಶ್ನೆಯೇ ಬರಲ್ಲ. ಎರಡು ದಿನಗಳಲ್ಲಿ ಎಲ್ಲವೂ ಸುಖಾಂತ್ಯ ಆಗಲಿದೆ ಎಂದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

5 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

8 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

9 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

9 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

9 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

9 hours ago