ಮೈಸೂರು: ದೇವಾಲಯಗಳ ನೆಲಸಮ ವಿಚಾರವಾಗಿ ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ಅದರ ಸಾಧಕ ಬಾಧಕಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಸದ್ಯಕ್ಕೆ ದೇವಾಲಯ ನೆಲಸಮ ವಿಚಾರಕ್ಕೆ ಸಿಎಂ ತಾತ್ಕಾಲಿಕ ತಡೆ ನೀಡಿದ್ದಾರೆ. ಎರಡು ದಿನಗಳಲ್ಲಿ ಈ ವಿಚಾರ ತೀರ್ಮಾನ ಆಗಲಿದೆ ಎಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಹುಚ್ಚಗಣಿ ದೇಗುಲ ನೆಲಸಮ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಇದು ಸಿಎಂ ಹಾಗೂ ಕಂದಾಯ ಸಚಿವರ ಗಮನಕ್ಕೆ ಬಂದಿದೆ. ಜಿಲ್ಲಾಡಳಿತಕ್ಕೆ ಸರ್ಕಾರ ನೊಟೀಸ್ ನೀಡಿದೆ. ನೊಟೀಸ್ ಗೆ ಉತ್ತರ ಬಂದ ಬಳಿಕ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವ ವಿಚಾರವನ್ನು ಸಿಎಂ ನಿರ್ಧರಿಸುತ್ತಾರೆ ಎಂದರು.
ದೇಗುಲ ನೆಲಸಮ ವಿರೋಧಿಸಿ ಹಿಂದೂ ಪರ ಸಂಘಟನೆಗಳಿಂದ ಎಲ್ಲಾ ಕಡೆ ಪ್ರತಿಭಟನೆ, ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸೋಮಶೇಖರ್, ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಪೊಲೀಸರು ಪರಿಸ್ಥಿತಿ ಮೇಲೆ ನಿಗಾ ಇಟ್ಟಿದ್ದಾರೆ. ಈ ಬೆಳವಣಿಗೆಗಳಿಂದ ಸರ್ಕಾರಕ್ಕೆ ಮುಜುಗರ ಉಂಟಾಗುವ ಪ್ರಶ್ನೆಯೇ ಬರಲ್ಲ. ಎರಡು ದಿನಗಳಲ್ಲಿ ಎಲ್ಲವೂ ಸುಖಾಂತ್ಯ ಆಗಲಿದೆ ಎಂದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…