ಮೈಸೂರು: ದೇವಾಲಯಗಳ ನೆಲಸಮ ವಿಚಾರವಾಗಿ ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ಅದರ ಸಾಧಕ ಬಾಧಕಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಸದ್ಯಕ್ಕೆ ದೇವಾಲಯ ನೆಲಸಮ ವಿಚಾರಕ್ಕೆ ಸಿಎಂ ತಾತ್ಕಾಲಿಕ ತಡೆ ನೀಡಿದ್ದಾರೆ. ಎರಡು ದಿನಗಳಲ್ಲಿ ಈ ವಿಚಾರ ತೀರ್ಮಾನ ಆಗಲಿದೆ ಎಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಹುಚ್ಚಗಣಿ ದೇಗುಲ ನೆಲಸಮ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಇದು ಸಿಎಂ ಹಾಗೂ ಕಂದಾಯ ಸಚಿವರ ಗಮನಕ್ಕೆ ಬಂದಿದೆ. ಜಿಲ್ಲಾಡಳಿತಕ್ಕೆ ಸರ್ಕಾರ ನೊಟೀಸ್ ನೀಡಿದೆ. ನೊಟೀಸ್ ಗೆ ಉತ್ತರ ಬಂದ ಬಳಿಕ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವ ವಿಚಾರವನ್ನು ಸಿಎಂ ನಿರ್ಧರಿಸುತ್ತಾರೆ ಎಂದರು.
ದೇಗುಲ ನೆಲಸಮ ವಿರೋಧಿಸಿ ಹಿಂದೂ ಪರ ಸಂಘಟನೆಗಳಿಂದ ಎಲ್ಲಾ ಕಡೆ ಪ್ರತಿಭಟನೆ, ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸೋಮಶೇಖರ್, ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಪೊಲೀಸರು ಪರಿಸ್ಥಿತಿ ಮೇಲೆ ನಿಗಾ ಇಟ್ಟಿದ್ದಾರೆ. ಈ ಬೆಳವಣಿಗೆಗಳಿಂದ ಸರ್ಕಾರಕ್ಕೆ ಮುಜುಗರ ಉಂಟಾಗುವ ಪ್ರಶ್ನೆಯೇ ಬರಲ್ಲ. ಎರಡು ದಿನಗಳಲ್ಲಿ ಎಲ್ಲವೂ ಸುಖಾಂತ್ಯ ಆಗಲಿದೆ ಎಂದರು.
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…