ಬ್ರಹ್ಮಾವರ: ದೇವಾಡಿಗ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ‘ರಾಜ್ಯ ದೇವಾಡಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕು, ಈ ಕುರಿತು ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಬೇಕು’ ಎಂಬ ಅಭಿಪ್ರಾಯ ಇಲ್ಲಿನ ಬಾರ್ಕೂರು ಏಕನಾಥೇಶ್ವರೀ ದೇವಸ್ಥಾನದಲ್ಲಿ ನಡೆದ ರಾಜ್ಯದ 58 ದೇವಾಡಿಗ ಸಮಾಜದವರ ಸಭೆಯಲ್ಲಿ ನಿರ್ಧರಿಸಲಾಯಿತು.
ದೇವಾಡಿಗ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಸಮಾಜವನ್ನು ಸರ್ಕಾರ ಗುರುತಿಸುವಂತೆ ಮಾಡಲು ಅಭಿವೃದ್ಧಿ ನಿಗಮದ ರಚನೆ ಅಗತ್ಯ ಎಂದು ದೇವಾಡಿಗ ಸಮಾಜದ ಮೋಹನ್ದಾಸ್ ಹಿರಿಯಡ್ಕ ಹೇಳಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಕಾರ್ಯಾಧ್ಯಕ್ಷ ಡಾ.ಕೆ.ದೇವರಾಜ್ ಮಂಗಳೂರು ಮಾತನಾಡಿ, ರಾಜ್ಯದಲ್ಲಿ ದೇವಾಡಿಗ ಸಮಾಜದ ಜನಸಂಖ್ಯೆ 6 ಲಕ್ಷಕ್ಕೂ ಹೆಚ್ಚಿದೆ. ಸಂಘಟಿತ ಪ್ರಯತ್ನದಿಂದ ಸಮಾಜಕ್ಕೆ ಶಕ್ತಿ ಬರುತ್ತದೆ. ಈ ಹಿನ್ನೆಲೆಯಲ್ಲಿ ಸಮಾಜಕ್ಕೆ ಅಭಿವೃದ್ಧಿ ನಿಗಮ ಬೇಕು ಎಂದರು.
ದೇವಳದ ಆಡಳಿತ ವಿಶ್ವಸ್ಥ ಅಣ್ಣಯ್ಯ ಶೇರಿಗಾರ್ ಅಧ್ಯಕ್ಷತೆ ವಹಿಸಿದ್ದರು. ಬಿ.ಆರ್.ದೇವಾಡಿಗ, ಕೆ.ಚಂದ್ರಶೇಖರ್, ರಜನಿಕಾಂತ್, ರಮೇಶ್ ವಂಡ್ಸೆ, ಡಾ.ಸುಂದರ್ ಮೊಯ್ಲಿ, ರವೀಂದ್ರ ಮೊಯ್ಲಿ, ಗಣೇಶ್ ದೇವಾಡಿಗ, ವಿಜಯ ಕೊಡವೂರು, ಶಂಕರ ಅಂಕದಕಟ್ಟೆ ಮತ್ತಿತರರು ಇದ್ದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…