Featured

ದೇವಾಡಿಗ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ನಿರ್ಧಾರ -Vishwanews24

ದೇವಾಡಿಗ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಲು ನಿರ್ಧಾರ -Vishwanews24

ಬ್ರಹ್ಮಾವರ: ದೇವಾಡಿಗ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ‘ರಾಜ್ಯ ದೇವಾಡಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕು, ಈ ಕುರಿತು ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಬೇಕು’ ಎಂಬ ಅಭಿಪ್ರಾಯ ಇಲ್ಲಿನ ಬಾರ್ಕೂರು ಏಕನಾಥೇಶ್ವರೀ ದೇವಸ್ಥಾನದಲ್ಲಿ ನಡೆದ ರಾಜ್ಯದ 58 ದೇವಾಡಿಗ ಸಮಾಜದವರ ಸಭೆಯಲ್ಲಿ ನಿರ್ಧರಿಸಲಾಯಿತು.

ದೇವಾಡಿಗ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಸಮಾಜವನ್ನು ಸರ್ಕಾರ ಗುರುತಿಸುವಂತೆ ಮಾಡಲು ಅಭಿವೃದ್ಧಿ ನಿಗಮದ ರಚನೆ ಅಗತ್ಯ ಎಂದು ದೇವಾಡಿಗ ಸಮಾಜದ ಮೋಹನ್‌ದಾಸ್ ಹಿರಿಯಡ್ಕ ಹೇಳಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಕಾರ್ಯಾಧ್ಯಕ್ಷ ಡಾ.ಕೆ.ದೇವರಾಜ್ ಮಂಗಳೂರು ಮಾತನಾಡಿ, ರಾಜ್ಯದಲ್ಲಿ ದೇವಾಡಿಗ ಸಮಾಜದ ಜನಸಂಖ್ಯೆ 6 ಲಕ್ಷಕ್ಕೂ ಹೆಚ್ಚಿದೆ. ಸಂಘಟಿತ ಪ್ರಯತ್ನದಿಂದ ಸಮಾಜಕ್ಕೆ ಶಕ್ತಿ ಬರುತ್ತದೆ. ಈ ಹಿನ್ನೆಲೆಯಲ್ಲಿ ಸಮಾಜಕ್ಕೆ ಅಭಿವೃದ್ಧಿ ನಿಗಮ ಬೇಕು ಎಂದರು.

ದೇವಳದ ಆಡಳಿತ ವಿಶ್ವಸ್ಥ ಅಣ್ಣಯ್ಯ ಶೇರಿಗಾರ್ ಅಧ್ಯಕ್ಷತೆ ವಹಿಸಿದ್ದರು. ಬಿ.ಆರ್.ದೇವಾಡಿಗ, ಕೆ.ಚಂದ್ರಶೇಖರ್, ರಜನಿಕಾಂತ್, ರಮೇಶ್ ವಂಡ್ಸೆ, ಡಾ.ಸುಂದರ್ ಮೊಯ್ಲಿ, ರವೀಂದ್ರ ಮೊಯ್ಲಿ, ಗಣೇಶ್ ದೇವಾಡಿಗ, ವಿಜಯ ಕೊಡವೂರು, ಶಂಕರ ಅಂಕದಕಟ್ಟೆ ಮತ್ತಿತರರು ಇದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago