ಬ್ರಹ್ಮಾವರ: ದೇವಾಡಿಗ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ‘ರಾಜ್ಯ ದೇವಾಡಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕು, ಈ ಕುರಿತು ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಬೇಕು’ ಎಂಬ ಅಭಿಪ್ರಾಯ ಇಲ್ಲಿನ ಬಾರ್ಕೂರು ಏಕನಾಥೇಶ್ವರೀ ದೇವಸ್ಥಾನದಲ್ಲಿ ನಡೆದ ರಾಜ್ಯದ 58 ದೇವಾಡಿಗ ಸಮಾಜದವರ ಸಭೆಯಲ್ಲಿ ನಿರ್ಧರಿಸಲಾಯಿತು.
ದೇವಾಡಿಗ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಸಮಾಜವನ್ನು ಸರ್ಕಾರ ಗುರುತಿಸುವಂತೆ ಮಾಡಲು ಅಭಿವೃದ್ಧಿ ನಿಗಮದ ರಚನೆ ಅಗತ್ಯ ಎಂದು ದೇವಾಡಿಗ ಸಮಾಜದ ಮೋಹನ್ದಾಸ್ ಹಿರಿಯಡ್ಕ ಹೇಳಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಕಾರ್ಯಾಧ್ಯಕ್ಷ ಡಾ.ಕೆ.ದೇವರಾಜ್ ಮಂಗಳೂರು ಮಾತನಾಡಿ, ರಾಜ್ಯದಲ್ಲಿ ದೇವಾಡಿಗ ಸಮಾಜದ ಜನಸಂಖ್ಯೆ 6 ಲಕ್ಷಕ್ಕೂ ಹೆಚ್ಚಿದೆ. ಸಂಘಟಿತ ಪ್ರಯತ್ನದಿಂದ ಸಮಾಜಕ್ಕೆ ಶಕ್ತಿ ಬರುತ್ತದೆ. ಈ ಹಿನ್ನೆಲೆಯಲ್ಲಿ ಸಮಾಜಕ್ಕೆ ಅಭಿವೃದ್ಧಿ ನಿಗಮ ಬೇಕು ಎಂದರು.
ದೇವಳದ ಆಡಳಿತ ವಿಶ್ವಸ್ಥ ಅಣ್ಣಯ್ಯ ಶೇರಿಗಾರ್ ಅಧ್ಯಕ್ಷತೆ ವಹಿಸಿದ್ದರು. ಬಿ.ಆರ್.ದೇವಾಡಿಗ, ಕೆ.ಚಂದ್ರಶೇಖರ್, ರಜನಿಕಾಂತ್, ರಮೇಶ್ ವಂಡ್ಸೆ, ಡಾ.ಸುಂದರ್ ಮೊಯ್ಲಿ, ರವೀಂದ್ರ ಮೊಯ್ಲಿ, ಗಣೇಶ್ ದೇವಾಡಿಗ, ವಿಜಯ ಕೊಡವೂರು, ಶಂಕರ ಅಂಕದಕಟ್ಟೆ ಮತ್ತಿತರರು ಇದ್ದರು.
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…