ಕನ್ನಡದ `ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ವಿವಾದಕ್ಕೆ ಜಯ ಸಿಕ್ಕಿದೆ. ಹಾಡಿನ ವಿರುದ್ಧ ಕೃತಿಚೌರ್ಯದ ಆರೋಪ ಮಾಡಿದ್ದ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಇದೀಗ ಎಲ್ಲಾ ತಡೆಯಾಜ್ಞೆ ತೆರವುಗೊಳಿಸಲಾಗಿದೆ.
ಸಿನಿಮಾದಲ್ಲಿ ಹಾಡು ಬಳಸದಂತೆ ತಡೆಯಾಜ್ಞೆ ನೀಡಲಾಗಿತ್ತು. ಕೇರಳದ ಪಾಲಕ್ಕಾಡ್ ಕೋರ್ಟ್ ಕೂಡ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಇತ್ತ ಕೋಝಿಕ್ಕೋಡ್ ಕೋರ್ಟ್ ಆದೇಶಕ್ಕೆ ನೀಡಿದ್ದ ತಡೆಯನ್ನೂ ಕೇರಳ ಹೈಕೋರ್ಟ್ ತೆರವುಗೊಳಿಸಿದ್ದು, ಕೆಳಹಂತದ ನ್ಯಾಯಾಲಯದ ನಿಲುವನ್ನು ಎತ್ತಿ ಹಿಡಿದಿದೆ.
`ಕಾಂತಾರ’ ಚಿತ್ರದ ವರಾಹ ರೂಪಂ ಹಾಡಿನ ಬಳಕೆಗೆ ಕೇರಳದ ಹೈಕೋರ್ಟ್ ಅನುಮತಿ ನೀಡಿದೆ. ಕೋಝಿಕ್ಕೋಡ್ ನ್ಯಾಯಲಯ ಕೂಡ ಈ ಹಿಂದೆ ತಡೆಯಾಜ್ಞೆ ತೆರವು ಮಾಡಿತ್ತು. ಇಂದು ಕೇರಳದ ಪಾಲಕ್ಕಾಡ್ ನ್ಯಾಯಲಯದಲ್ಲೂ ತಡೆಯಾಜ್ಞೆ ತೆರವು ಮಾಡಿದೆ. ಈ ಮೂಲಕ `ಕಾಂತಾರ’ ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದರೊಂದಿಗೆ ‘ಕಾಂತಾರ ‘ಚಿತ್ರದ ‘ವರಾಹ ರೂಪಂ’ ಹಾಡಿಗೆ ಇದ್ದ ಎಲ್ಲಾ ಅಡೆತಡೆ ನಿವಾರಣೆ ಆಗಿದೆ.
ಇದೀಗ ನಟ ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. “ದೇವಾನು ದೈವಗಳ ಆಶೀರ್ವಾದ ಹಾಗೂ ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ ಒಟಿಟಿನಲ್ಲಿ ಹಾಡು ಬದಲಾಯಿಸಲಿದ್ದೇವೆ” ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…