ದೇವಾಲಯಗಳಲ್ಲಿ ಸಂಪ್ರದಾಯ ಹಾಗೂ ಶಿಷ್ಟಾಚಾರ ಪಾಲಿಸುವ ಉದ್ದೇಶದಿಂದ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ನಿಯಮ ಜಾರಿಗೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಬೆಂಗಳೂರು: ದೇವಾಲಯಗಳಲ್ಲಿ ಸಂಪ್ರದಾಯ ಹಾಗೂ ಶಿಷ್ಟಾಚಾರ ಪಾಲಿಸುವ ಉದ್ದೇಶದಿಂದ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ನಿಯಮ ಜಾರಿಗೆ ತರುವ ಕುರಿತು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ವಸ್ತ್ರಸಂಹಿತೆ ಬಗ್ಗೆ ಅನೇಕ ಪ್ರಸ್ತಾಪಗಳು ಬಂದಿದ್ದು, ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಕೇರಳ ಗುರುವಾಯೂರು ಸೇರಿದಂತೆ ದಕ್ಷಿಣ ಭಾರತದ ಬಹುತೇಕ ದೇವಾಲಯಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಕಡ್ಡಾಯವಾಗಿದೆ. ಇನ್ನು ಇತ್ತೀಚಿಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿಯೂ ಗರ್ಭಗುಡಿ ಪ್ರವೇಶಿಸಲು ವಸ್ತ್ರ ಸಂಹಿತೆ ಅನುಸರಿಸುವುದು ಕಡ್ಡಾಯ ಎಂಬ ನಿಯಮ ಜಾರಿಗೆ ತರಲಾಗಿದೆ. ಇದೀಗ ರಾಜ್ಯದಲ್ಲಿ ಈ ನಿಯಮವನ್ನು ಜಾರಿಗೆ ತರಬೇಕು ಎಂಬ ಕೂಗು ಕೇಳಿಬಂದಿದೆ ಎಂದು ಹೇಳಿದರು.

ಇನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಬೇಕು ಎಂದು ವಿಎಚ್?ಪಿ, ಬಜರಂಗದಳ ಆಗ್ರಹಿಸಿತ್ತು. ಭಕ್ತರ ದಿರಿಸಿಗೆ ಆಕ್ಷೇಪಿಸಿ ಈ ಬಗ್ಗೆ ಮುಜರಾಯಿ ಇಲಾಖೆಗೆ ಮನವಿ ಮಾಡಿತ್ತು.ಈ ಕುರಿತು ಮಾತನಾಡಿದ ಸಚಿವರು, ವಸ್ತ್ರ ಸಂಹಿತೆ ಕುರಿತು ಹಲವು ದೇವಸ್ಥಾನಗಳಿಂದ ಪ್ರಸ್ತಾವ ಬಂದಿವೆ. ಜೊತೆಗೆ ಸಂಘ ಸಂಸ್ಥೆಗಳಿಂದಲೂ ಪ್ರಸ್ತಾವ ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಬೇಕು. ನಂತರ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಕುರಿತು ತೀರ್ಮಾನ ಮಾಡುತ್ತೇವೆ ಎಂದು ಅವರು ತಿಳಿಸಿದರು. ಜನವರಿ 20, 21ರಂದು ಧಾರ್ಮಿಕ ಪರಿಷತ್ ಸಭೆ ಇದೆ. ಈ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾಣ ಕೈಗೊಳ್ಳಲಾಗುವುದು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago