ಬೆಂಗಳೂರು: ದೇವಾಲಯಗಳಲ್ಲಿ ಸಂಪ್ರದಾಯ ಹಾಗೂ ಶಿಷ್ಟಾಚಾರ ಪಾಲಿಸುವ ಉದ್ದೇಶದಿಂದ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ನಿಯಮ ಜಾರಿಗೆ ತರುವ ಕುರಿತು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ವಸ್ತ್ರಸಂಹಿತೆ ಬಗ್ಗೆ ಅನೇಕ ಪ್ರಸ್ತಾಪಗಳು ಬಂದಿದ್ದು, ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಕೇರಳ ಗುರುವಾಯೂರು ಸೇರಿದಂತೆ ದಕ್ಷಿಣ ಭಾರತದ ಬಹುತೇಕ ದೇವಾಲಯಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಕಡ್ಡಾಯವಾಗಿದೆ. ಇನ್ನು ಇತ್ತೀಚಿಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿಯೂ ಗರ್ಭಗುಡಿ ಪ್ರವೇಶಿಸಲು ವಸ್ತ್ರ ಸಂಹಿತೆ ಅನುಸರಿಸುವುದು ಕಡ್ಡಾಯ ಎಂಬ ನಿಯಮ ಜಾರಿಗೆ ತರಲಾಗಿದೆ. ಇದೀಗ ರಾಜ್ಯದಲ್ಲಿ ಈ ನಿಯಮವನ್ನು ಜಾರಿಗೆ ತರಬೇಕು ಎಂಬ ಕೂಗು ಕೇಳಿಬಂದಿದೆ ಎಂದು ಹೇಳಿದರು.
ಇನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಬೇಕು ಎಂದು ವಿಎಚ್?ಪಿ, ಬಜರಂಗದಳ ಆಗ್ರಹಿಸಿತ್ತು. ಭಕ್ತರ ದಿರಿಸಿಗೆ ಆಕ್ಷೇಪಿಸಿ ಈ ಬಗ್ಗೆ ಮುಜರಾಯಿ ಇಲಾಖೆಗೆ ಮನವಿ ಮಾಡಿತ್ತು.ಈ ಕುರಿತು ಮಾತನಾಡಿದ ಸಚಿವರು, ವಸ್ತ್ರ ಸಂಹಿತೆ ಕುರಿತು ಹಲವು ದೇವಸ್ಥಾನಗಳಿಂದ ಪ್ರಸ್ತಾವ ಬಂದಿವೆ. ಜೊತೆಗೆ ಸಂಘ ಸಂಸ್ಥೆಗಳಿಂದಲೂ ಪ್ರಸ್ತಾವ ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಬೇಕು. ನಂತರ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಕುರಿತು ತೀರ್ಮಾನ ಮಾಡುತ್ತೇವೆ ಎಂದು ಅವರು ತಿಳಿಸಿದರು. ಜನವರಿ 20, 21ರಂದು ಧಾರ್ಮಿಕ ಪರಿಷತ್ ಸಭೆ ಇದೆ. ಈ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾಣ ಕೈಗೊಳ್ಳಲಾಗುವುದು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…