Featured

ದೇಶಕ್ಕಾಗಿ ಬಜರಂಗದಳ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧ , ಈ ಹೋರಾಟ ನಿರಂತರ  : ಸುನಿಲ್.ಕೆ.ಆರ್ – vishwanews24

ದೇಶಕ್ಕಾಗಿ ಬಜರಂಗದಳ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧ , ಈ ಹೋರಾಟ ನಿರಂತರ  : ಸುನಿಲ್.ಕೆ.ಆರ್

ಪುತ್ತೂರು: ಹಿಂದೂ ಕಾರ್ಯಕರ್ತರ ವಿರುದ್ಧ ಗಡಿಪಾರು ನೊಟೀಸ್ ನೀಡಿರುವ ಪೊಲೀಸ್ ಇಲಾಖೆ ಕ್ರಮವನ್ನು ಖಂಡಿಸಿ ಪುತ್ತೂರಿನ ಅಮರ್ ಜವಾನ್‌ ಜ್ಯೋತಿ ವೃತ್ತದ ಬಳಿ ಇಂದು ಬೆಳಿಗ್ಗೆ ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನೆ ನಡೆಯತು.

ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಬಜರಂಗದಳ ಮುಖಂಡ ಸುನಿಲ್.ಕೆ.ಆರ್ ಅವರು, ದೇಶಕ್ಕಾಗಿ ಬಜರಂಗದಳದ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧವಾಗಿದ್ದಾರೆ. ಬಜರಂಗದಳದ ಕಾರ್ಯಕರ್ತರು ಅತ್ಯಾಚಾರ, ದರೋಡೆ ಮಾಡಿ ರೌಡಿ ಪಟ್ಟ ಕಟ್ಟಿಕೊಂಡವರಲ್ಲ, ಗೋ ಮಾತೆ, ನಮ್ಮ ಅಕ್ಕ-ತಂಗಿಯಂದಿರ ರಕ್ಷಣೆಗಾಗಿ ಕೇಸು ಹಾಕಿಸಿಕೊಂಡವರು. ಈ ಹೋರಾಟಗಳು ನಿರಂತರವಾಗಿ ನಡೆಯಲಿದೆ ಎಂದರು.

ಹಿಂದೂ ಕಾರ್ಯಕರ್ತರನ್ನ ಗಡಿಪಾರು ಮಾಡಿದರೆ ಹಿಂದೂ ಸಂಘಟನೆಗಳನ್ನು ವಿಚಲಿತಗೊಳಿಸಬಹುದು ಎನ್ನುವ ಭ್ರಮೆ ಬೇಡ. ಅಲ್ಪಸಂಖ್ಯಾತರ ತುಷ್ಠೀಕರಣಕ್ಕಾಗಿ ಈ ರೀತಿಯ ಕೃತ್ಯ ಮಾಡಬೇಡಿ. ನಮ್ಮ ಕಾರ್ಯಕರ್ತರನ್ನು ಗಡಿಪಾರು ಮಾಡಿದಲ್ಲಿ ಸಂಘಟನೆಯಿಂದ ದೂರ ಉಳಿಯುತ್ತಾರೆ ಎಂದು ಸರಕಾರ, ಪೊಲೀಸ್ ಇಲಾಖೆ ತಿಳಿದುಕೊಂಡಿದೆ. ಆದರೆ ಇದು ಯಾವತ್ತೂ ಸಾಧ್ಯವಿಲ್ಲ. ಕಾರ್ಯಕರ್ತರ ಮೇಲಿನ ಗಡಿಪಾರು ನೊಟೀಸ್ ತಕ್ಷಣ ವಾಪಾಸು ಪಡೆಯಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago