ಪುತ್ತೂರು: ಹಿಂದೂ ಕಾರ್ಯಕರ್ತರ ವಿರುದ್ಧ ಗಡಿಪಾರು ನೊಟೀಸ್ ನೀಡಿರುವ ಪೊಲೀಸ್ ಇಲಾಖೆ ಕ್ರಮವನ್ನು ಖಂಡಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ವೃತ್ತದ ಬಳಿ ಇಂದು ಬೆಳಿಗ್ಗೆ ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನೆ ನಡೆಯತು.
ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಬಜರಂಗದಳ ಮುಖಂಡ ಸುನಿಲ್.ಕೆ.ಆರ್ ಅವರು, ದೇಶಕ್ಕಾಗಿ ಬಜರಂಗದಳದ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧವಾಗಿದ್ದಾರೆ. ಬಜರಂಗದಳದ ಕಾರ್ಯಕರ್ತರು ಅತ್ಯಾಚಾರ, ದರೋಡೆ ಮಾಡಿ ರೌಡಿ ಪಟ್ಟ ಕಟ್ಟಿಕೊಂಡವರಲ್ಲ, ಗೋ ಮಾತೆ, ನಮ್ಮ ಅಕ್ಕ-ತಂಗಿಯಂದಿರ ರಕ್ಷಣೆಗಾಗಿ ಕೇಸು ಹಾಕಿಸಿಕೊಂಡವರು. ಈ ಹೋರಾಟಗಳು ನಿರಂತರವಾಗಿ ನಡೆಯಲಿದೆ ಎಂದರು.
ಹಿಂದೂ ಕಾರ್ಯಕರ್ತರನ್ನ ಗಡಿಪಾರು ಮಾಡಿದರೆ ಹಿಂದೂ ಸಂಘಟನೆಗಳನ್ನು ವಿಚಲಿತಗೊಳಿಸಬಹುದು ಎನ್ನುವ ಭ್ರಮೆ ಬೇಡ. ಅಲ್ಪಸಂಖ್ಯಾತರ ತುಷ್ಠೀಕರಣಕ್ಕಾಗಿ ಈ ರೀತಿಯ ಕೃತ್ಯ ಮಾಡಬೇಡಿ. ನಮ್ಮ ಕಾರ್ಯಕರ್ತರನ್ನು ಗಡಿಪಾರು ಮಾಡಿದಲ್ಲಿ ಸಂಘಟನೆಯಿಂದ ದೂರ ಉಳಿಯುತ್ತಾರೆ ಎಂದು ಸರಕಾರ, ಪೊಲೀಸ್ ಇಲಾಖೆ ತಿಳಿದುಕೊಂಡಿದೆ. ಆದರೆ ಇದು ಯಾವತ್ತೂ ಸಾಧ್ಯವಿಲ್ಲ. ಕಾರ್ಯಕರ್ತರ ಮೇಲಿನ ಗಡಿಪಾರು ನೊಟೀಸ್ ತಕ್ಷಣ ವಾಪಾಸು ಪಡೆಯಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …