Featured

ದೇಶಕ್ಕಾಗಿ ಬಜರಂಗದಳ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧ , ಈ ಹೋರಾಟ ನಿರಂತರ  : ಸುನಿಲ್.ಕೆ.ಆರ್ – vishwanews24

ದೇಶಕ್ಕಾಗಿ ಬಜರಂಗದಳ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧ , ಈ ಹೋರಾಟ ನಿರಂತರ  : ಸುನಿಲ್.ಕೆ.ಆರ್

ಪುತ್ತೂರು: ಹಿಂದೂ ಕಾರ್ಯಕರ್ತರ ವಿರುದ್ಧ ಗಡಿಪಾರು ನೊಟೀಸ್ ನೀಡಿರುವ ಪೊಲೀಸ್ ಇಲಾಖೆ ಕ್ರಮವನ್ನು ಖಂಡಿಸಿ ಪುತ್ತೂರಿನ ಅಮರ್ ಜವಾನ್‌ ಜ್ಯೋತಿ ವೃತ್ತದ ಬಳಿ ಇಂದು ಬೆಳಿಗ್ಗೆ ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನೆ ನಡೆಯತು.

ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಬಜರಂಗದಳ ಮುಖಂಡ ಸುನಿಲ್.ಕೆ.ಆರ್ ಅವರು, ದೇಶಕ್ಕಾಗಿ ಬಜರಂಗದಳದ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧವಾಗಿದ್ದಾರೆ. ಬಜರಂಗದಳದ ಕಾರ್ಯಕರ್ತರು ಅತ್ಯಾಚಾರ, ದರೋಡೆ ಮಾಡಿ ರೌಡಿ ಪಟ್ಟ ಕಟ್ಟಿಕೊಂಡವರಲ್ಲ, ಗೋ ಮಾತೆ, ನಮ್ಮ ಅಕ್ಕ-ತಂಗಿಯಂದಿರ ರಕ್ಷಣೆಗಾಗಿ ಕೇಸು ಹಾಕಿಸಿಕೊಂಡವರು. ಈ ಹೋರಾಟಗಳು ನಿರಂತರವಾಗಿ ನಡೆಯಲಿದೆ ಎಂದರು.

ಹಿಂದೂ ಕಾರ್ಯಕರ್ತರನ್ನ ಗಡಿಪಾರು ಮಾಡಿದರೆ ಹಿಂದೂ ಸಂಘಟನೆಗಳನ್ನು ವಿಚಲಿತಗೊಳಿಸಬಹುದು ಎನ್ನುವ ಭ್ರಮೆ ಬೇಡ. ಅಲ್ಪಸಂಖ್ಯಾತರ ತುಷ್ಠೀಕರಣಕ್ಕಾಗಿ ಈ ರೀತಿಯ ಕೃತ್ಯ ಮಾಡಬೇಡಿ. ನಮ್ಮ ಕಾರ್ಯಕರ್ತರನ್ನು ಗಡಿಪಾರು ಮಾಡಿದಲ್ಲಿ ಸಂಘಟನೆಯಿಂದ ದೂರ ಉಳಿಯುತ್ತಾರೆ ಎಂದು ಸರಕಾರ, ಪೊಲೀಸ್ ಇಲಾಖೆ ತಿಳಿದುಕೊಂಡಿದೆ. ಆದರೆ ಇದು ಯಾವತ್ತೂ ಸಾಧ್ಯವಿಲ್ಲ. ಕಾರ್ಯಕರ್ತರ ಮೇಲಿನ ಗಡಿಪಾರು ನೊಟೀಸ್ ತಕ್ಷಣ ವಾಪಾಸು ಪಡೆಯಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 hour ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 hour ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago