ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಗುಣವೇ ಸುಳ್ಳು ಹೇಳುವುದು. ದೇಶಕ್ಕಾಗಿ ಹುತಾತ್ಮರಾದ ರಾಜೀವ್ ಗಾಂಧಿ ಬಗ್ಗೆ ಈ ರೀತಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಮೋದಿಗೆ ಹೃದಯವು ಇಲ್ಲ, ದೇಶ ಪ್ರೇಮವೂ ಇಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ ನಂಬರ್ ಒನ್ ಭ್ರಷ್ಟನಾಗಿ ಸಾವನ್ನಪ್ಪಿದ್ದಾರೆ ಎನ್ನುವ ಮೋದಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. 30 ವರ್ಷಗಳ ಹಿಂದೆಯೇ ಈ ವಿಚಾರವನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೂ ಮೋದಿ ಈ ವಿಚಾರ ತೆಗೆಯುವುದು ತೀವ್ರ ಖಂಡನೀಯ ಎಂದರು.
ಮೋದಿಗೆ ಯಾವ ವಿಚಾರ ಮಾತನಾಡಬೇಕು ಎನ್ನುವ ಪ್ರಜ್ಞೆಯೂ ಇಲ್ಲ. ಇಂಥವರು ನಮ್ಮ ದೇಶದ ಪ್ರಧಾನಿಯಾಗಿ ಇರುವುದು ದೇಶದ ಜನರ ದುರ್ದೈವವಾಗಿದೆ. ಕೇವಲ ಮಾತಿನಿಂದ ಮರುಳು ಮಾಡುವವರಿಗೆ ಈ ಬಾರಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಹೇಳಿರುವ ಮೋದಿಗೆ ರಾಜಕೀಯ ಪರಿಜ್ಞಾನವಿಲ್ಲ ಎಂದು ಕುಟುಕಿದರು. ಅಮೇಥಿಯಲ್ಲಿ ರಾಹುಲ್ಗಾಂಧಿ, ರಾಯ್ಬರೇಲಿಯಲ್ಲಿ ಸೋನಿಯಾಗಾಂಧಿ ಸೋಲುತ್ತಾರೆ ಎಂದು ಹೇಳುತ್ತಿರುವ ಮೋದಿಯವರು ಎರಡೂ ಕ್ಷೇತ್ರದಲ್ಲಿ ಅವರಿಬ್ಬರೂ ಗೆದ್ದರೆ ನರೇಂದ್ರ ಮೋದಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ ಎಂದು ಖರ್ಗೆ ಸವಾಲು ಹಾಕಿದರು.
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…