Featured

ದೇಶಕ್ಕಾಗಿ ಹುತಾತ್ಮರಾದ ರಾಜೀವ್ ಗಾಂಧಿ ಬಗ್ಗೆ ಈ ರೀತಿ ಕೀಳಾಗಿ ಮಾತನಾಡುವುದು ಸರಿಯಲ್ಲ : ಮಲ್ಲಿಕಾರ್ಜುನ ಖರ್ಗೆ -Vishwanews24

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಗುಣವೇ ಸುಳ್ಳು ಹೇಳುವುದು. ದೇಶಕ್ಕಾಗಿ ಹುತಾತ್ಮರಾದ ರಾಜೀವ್ ಗಾಂಧಿ ಬಗ್ಗೆ ಈ ರೀತಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಮೋದಿಗೆ ಹೃದಯವು ಇಲ್ಲ, ದೇಶ ಪ್ರೇಮವೂ ಇಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ ನಂಬರ್ ಒನ್ ಭ್ರಷ್ಟನಾಗಿ ಸಾವನ್ನಪ್ಪಿದ್ದಾರೆ ಎನ್ನುವ ಮೋದಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. 30 ವರ್ಷಗಳ ಹಿಂದೆಯೇ ಈ ವಿಚಾರವನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೂ ಮೋದಿ ಈ ವಿಚಾರ ತೆಗೆಯುವುದು ತೀವ್ರ ಖಂಡನೀಯ ಎಂದರು.

ಮೋದಿಗೆ ಯಾವ ವಿಚಾರ ಮಾತನಾಡಬೇಕು ಎನ್ನುವ ಪ್ರಜ್ಞೆಯೂ ಇಲ್ಲ. ಇಂಥವರು ನಮ್ಮ ದೇಶದ ಪ್ರಧಾನಿಯಾಗಿ ಇರುವುದು ದೇಶದ ಜನರ ದುರ್ದೈವವಾಗಿದೆ. ಕೇವಲ ಮಾತಿನಿಂದ ಮರುಳು ಮಾಡುವವರಿಗೆ ಈ ಬಾರಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಹೇಳಿರುವ ಮೋದಿಗೆ ರಾಜಕೀಯ ಪರಿಜ್ಞಾನವಿಲ್ಲ ಎಂದು ಕುಟುಕಿದರು. ಅಮೇಥಿಯಲ್ಲಿ ರಾಹುಲ್‍ಗಾಂಧಿ, ರಾಯ್‍ಬರೇಲಿಯಲ್ಲಿ ಸೋನಿಯಾಗಾಂಧಿ ಸೋಲುತ್ತಾರೆ ಎಂದು ಹೇಳುತ್ತಿರುವ ಮೋದಿಯವರು ಎರಡೂ ಕ್ಷೇತ್ರದಲ್ಲಿ ಅವರಿಬ್ಬರೂ ಗೆದ್ದರೆ ನರೇಂದ್ರ ಮೋದಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ ಎಂದು ಖರ್ಗೆ ಸವಾಲು ಹಾಕಿದರು.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

1 day ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

1 day ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

1 day ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago