ದೇಶಕ್ಕೆ ಒಳ್ಳೆ ಭವಿಷ್ಯ ಬಂದಿಲ್ಲ, ಬದಲಾಗಿ ಬಿಜೆಪಿ ನಾಯಕರಿಗೆ ಮಾತ್ರ ಅಚ್ಚೇ ದಿನ ಬಂದಿದೆ : ಜಮೀರ್ ಅಹ್ಮದ್

Featured, ರಾಜ್ಯ ನ್ಯೂಸ್

ಬಿಜೆಪಿಗೆ ಮತ ಹಾಕಿದ ಜನ ಈಗ ಬೀದಿ ಬೀದಿಯಲ್ಲಿ ಉಗಿಯುತ್ತಿದ್ದಾರೆ…

ದೇಶಕ್ಕೆ ಒಳ್ಳೆ ಭವಿಷ್ಯ ಬಂದಿಲ್ಲ, ಬದಲಾಗಿ ಬಿಜೆಪಿ ನಾಯಕರಿಗೆ ಮಾತ್ರ ಅಚ್ಚೇ ದಿನ ಬಂದಿದೆ : ಜಮೀರ್ ಅಹ್ಮದ್

ಕೋಲಾರ: ಅಂದು ಬಿಜೆಪಿಗೆ ಮತ ಹಾಕಿದ ಜನ ಇಂದು ಬೀದಿ ಬೀದಿಯಲ್ಲಿ ಉಗಿಯುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.

ಕೋಲಾರದ ಮಾಲೂರಿನಲ್ಲಿ ಶಾಸಕ ಕೆ.ವೈ.ನಂಜೇಗೌಡ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್‍ಗಾಗಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಒಳ್ಳೆ ಭವಿಷ್ಯ ಬಂದಿಲ್ಲ. ಬದಲಾಗಿ ಬಿಜೆಪಿ ನಾಯಕರಿಗೆ ಮಾತ್ರ ಅಚ್ಚೇ ದಿನ ಬಂದಿದೆ.

ಪಿಎಂ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ ಎಲ್ಲೂ ಆಗಿಲ್ಲ. ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗೀತಾ ಇದ್ದಾರೆ. ಒಂದು ಕಡೆ ಕೊರೊನಾದಿಂದ ಜನ ಸಾಯುತ್ತಿದ್ದರೆ, ಮತ್ತೊಂದಡೆ ತೈಲ ಬೆಲೆ ಏರಿಕೆ ಆಗುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.