ಬೆಂಗಳೂರು: ‘ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದೇನೆ. ಹೀಗಾಗಿ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಇಂದಿನಿಂದಲೇ ಕೆಲಸ ಮಾಡಲು ಅವರು ಹೇಳಿದ್ದಾರೆ’ ಎಂದು ಸೊರಬ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.
ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮಧು ಬಂಗಾರಪ್ಪ, ‘ಏಪ್ರಿಲ್ ತಿಂಗಳಲ್ಲಿ ಸೊರಬ ಕ್ಷೇತ್ರದಲ್ಲಿ ದೊಡ್ಡ ಸಮಾವೇಶ ಆಯೋಜಿಸಿ ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತೇನೆ’ ಎಂದರು.
ಹೆಜಮಾಡಿ ದುಬಾರಿ ಟೋಲ್ ; ಮಾರ್ಚ್15 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಲು ಮುಂದಾದ ಖಾಸಗಿ ಬಸ್ ಮಾಲಕರು -Vishwanews24
‘ಸಿದ್ದರಾಮಯ್ಯ ಹಿರಿಯರು, ಅವರು ಮುಖ್ಯಮಂತ್ರಿ ಆಗಿದ್ದವರು. ನಮ್ಮ ತಂದೆನೂ ಮುಖ್ಯಮಂತ್ರಿ ಆಗಿದ್ದವರು. ಹೀಗಾಗಿ ಅವರನ್ನು ಭೇಟಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ಭೇಟಿ ಮಾಡ್ತೇನೆ’ ಎಂದೂ ತಿಳಿಸಿದರು.
‘ಎಚ್. ಡಿ. ಕುಮಾರಸ್ವಾಮಿ ದ್ರೋಹ ಬಗೆದರೇ?’ ಎಂದು ಕೇಳಿದ ಪ್ರಶ್ನೆಗೆ, ‘ನಾನು ಆ ಬಗ್ಗೆ ಏನೂ ಹೇಳುವುದಿಲ್ಲ. ನನಗೆ ಅವರ ಬಗ್ಗೆ ವೈಯಕ್ತಿಕವಾಗಿ ಗೌರವ ಇದೆ. ಈ ಸಂದರ್ಭದಲ್ಲಿ ದೇಶಕ್ಕೆ ಕಾಂಗ್ರೆಸ್ ಅಗತ್ಯ ಇದೆ. ನನ್ನ ಮತ್ತು ಕುಮಾರಸ್ವಾಮಿ ನಡುವೆ ವೈಯಕ್ತಿಕವಾಗಿ ಏನೂ ಇಲ್ಲ. ಈಗ ಯಾವುದೇ ಚರ್ಚೆ ಬೇಡ. ಇವತ್ತು ಮನಸಾರೆ ಕಾಂಗ್ರೆಸ್ಗೆ ಹೋಗಿದ್ದೇನೆ’ ಎಂದರು.
ಪುತ್ತೂರು : ಗೋಡಂಬಿ ಬೀಜ ಗಂಟಲಲ್ಲಿ ಸಿಲುಕಿ ಬಾಲಕ ಸಾವು -Vishwanews24
‘ಕಾಂಗ್ರೆಸ್ ಪಕ್ಷ ನನ್ನನ್ನು ಹೇಗೆ ಉಪಯೋಗಿಸಿಕೊಳ್ಳುತ್ತೊ ಹಾಗೇ ಕೆಲಸ ಮಾಡುತ್ತೇನೆ. ಚುನಾವಣೆ ಅನ್ನೋದು ಪರೀಕ್ಷೆ ಥರ. ಪಾಸ್ ಫೇಲ್ ಥರ.. ಇಬ್ಬರೇ ಅಲ್ಲಿ ಪಾಸಾಗೋದು. ಆದರೆ ನಾಯಕತ್ವ ಎಂದೂ ಸೋಲುವುದಿಲ್ಲ. ನಾನು ಜೆಡಿಎಸ್ನಲ್ಲಿ ಯಾವತ್ತೂ ಅಧಿಕಾರ ಅನುಭವಿಸಿಲ್ಲ. ಕಾಂಗ್ರೆಸ್ನಲ್ಲಿ ಬೆಳೆಯಲು ಅವಕಾಶ ಇದೆ, ಅದಕ್ಕೆ ಸೇರ್ಪಡೆ ಆಗುತ್ತಿದ್ದೇನೆ’ ಎಂದು ಸಮರ್ಥನೆ ನೀಡಿದರು.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…