Featured

ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ : ಮಮತಾ ಬ್ಯಾನರ್ಜಿ -Vishwanews24

ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ : ಮಮತಾ ಬ್ಯಾನರ್ಜಿ -Vishwanews24

ನಂದಿಗ್ರಾಮ: ನಂದಿಗ್ರಾಮ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆ ಬಯಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ತಮ್ಮ ಪ್ರಚಾರ ಅಭಿಯಾನವನ್ನು ಭರ್ಜರಿಯಾಗಿ ಮುಗಿಸಿದರು. ರಾಷ್ಟ್ರಗೀತೆ ಹಾಡುವ ವೇಳೆ ವ್ಹೀಲ್‌ಚೇರ್‌ನಿಂದ ಎದ್ದುನಿಂತು ಗೌರವ ಸೂಚಿಸಿ ಗಮನ ಸೆಳೆದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅವರ ಮಾಜಿ ಸಹವರ್ತಿ ಸುವೇಂಧು ಅಧಿಕಾರಿ ನಡುವಿನ ಹೋರಾಟದಿಂದಾಗಿ ನಂದಿಗ್ರಾಮ ಕ್ಷೇತ್ರ ರಾಷ್ಟ್ರದ ಗಮನ ಸೆಳೆದಿದೆ. ಈ ಕ್ಷೇತ್ರದಲ್ಲಿ ಗುರುವಾರ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರ ಮಂಗಳವಾರ ಸಂಜೆ ಮುಕ್ತಾಯವಾಯಿತು.

ಇದನ್ನೂ ಓದಿ : ಇನ್ಮುಂದೆ ರೈಲಿನಲ್ಲಿ ಮೊಬೈಲ್‌ ಹಾಗೂ ಎಲೆಕ್ಟ್ರಾನಿಕ್‌‌ ಉಪಕರಣಗಳ ಚಾರ್ಜಿಂಗ್ ನಿರ್ಬಂಧ : ಭಾರತೀಯ ರೈಲ್ವೆ -Vishwanews24

ನಾಮಪತ್ರ ಸಲ್ಲಿಕೆ ದಿನ ಕಾಲಿಗೆ ತೀವ್ರ ಗಾಯವಾಗಿದ್ದ ಮಮತಾ ಬ್ಯಾನರ್ಜಿ ವ್ಹೀಲ್‌ಚೇರ್‌ನಲ್ಲಿ ಕುಳಿತೇ ರಾಜ್ಯಾದ್ಯಂತ ಪ್ರಚಾರ ನಡೆಸಿದ್ದರು. ತಮ್ಮ ಪ್ರತಿ ಪ್ರಚಾರ ಭಾಷಣದಲ್ಲಿ, “ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ” ಎಂದು ಒತ್ತಿ ಹೇಳಿದ್ದರು.

ಅವರು ರಾಷ್ಟ್ರಗೀತೆ ವೇಳೆ ವ್ಹೀಲ್‌ಚೇರ್‌ನಿಂದ ಎದ್ದು ನಿಲ್ಲುವ ಮೂಲಕ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಇದನ್ನು ಮಾಸ್ಟರ್‌ಸ್ಟ್ರೋಕ್ ಎಂದು ಬಣ್ಣಿಸಲಾಗಿದೆ.

ಹತ್ತು ವರ್ಷದ ಹಿಂದೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾರಣವಾಗಿದ್ದ ನಂದಿಗ್ರಾಮ, 35 ವರ್ಷಗಳ ಎಡರಂಗ ಸರ್ಕಾರದ ಆಡಳಿತವನ್ನು ಕೊನೆಗೊಳಿಸಿತ್ತು. ಈ ಬಾರಿಯ ಚುನಾವಣೆ ಹೋರಾಟ ಅವರ ವೃತ್ತಿಜೀವನದಲ್ಲೇ ಕಠಿಣ ಹೋರಾಟ ಎಂದು ವಿಶ್ಲೇಷಿಸಲಾಗುತ್ತಿದೆ. ಸುವೇಂಧು ಅಧಿಕಾರಿಗೆ ನಂದಿಗ್ರಾಮವನ್ನು ಆಯ್ಕೆ ಮಾಡಿಕೊಳ್ಳುವುದು ಅನಿವಾರ್ಯವಾಗಿತ್ತು.

ಎಡರಂಗ ಸರ್ಕಾರ ಭೂಮಿಸ್ವಾಧೀನಪಡಿಸಿಕೊಂಡಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ತಳಮಟ್ಟದ ಸಂಘಟನೆ ಮಾಡಿದ್ದ ಸುವೇಂಧು ಅಧಿಕಾರಿ ತೀರಾ ಇತ್ತೀಚಿನವರೆಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ನಿಕಟವರ್ತಿಯಾಗಿದ್ದರು. ಇತ್ತೀಚೆಗೆ ಬಿಜೆಪಿ ಸೇರುವ ಮೂಲಕ ದೀದಿ ವಿರುದ್ಧ ಸಮರ ಸಾರಿದ್ದರು.

ಇದನ್ನೂ ಓದಿ :ಮಂಗಳೂರು:ಎ.1 ರಿಂದ ಕರಾವಳಿಯ ತಲಪಾಡಿ, ಹೆಜಮಾಡಿ, ಸಾಸ್ತಾನ ಟೋಲ್‌ ದರ ಏರಿಕೆ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

22 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago