Featured

ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ : ಮಮತಾ ಬ್ಯಾನರ್ಜಿ -Vishwanews24

ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ : ಮಮತಾ ಬ್ಯಾನರ್ಜಿ -Vishwanews24

ನಂದಿಗ್ರಾಮ: ನಂದಿಗ್ರಾಮ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆ ಬಯಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ತಮ್ಮ ಪ್ರಚಾರ ಅಭಿಯಾನವನ್ನು ಭರ್ಜರಿಯಾಗಿ ಮುಗಿಸಿದರು. ರಾಷ್ಟ್ರಗೀತೆ ಹಾಡುವ ವೇಳೆ ವ್ಹೀಲ್‌ಚೇರ್‌ನಿಂದ ಎದ್ದುನಿಂತು ಗೌರವ ಸೂಚಿಸಿ ಗಮನ ಸೆಳೆದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅವರ ಮಾಜಿ ಸಹವರ್ತಿ ಸುವೇಂಧು ಅಧಿಕಾರಿ ನಡುವಿನ ಹೋರಾಟದಿಂದಾಗಿ ನಂದಿಗ್ರಾಮ ಕ್ಷೇತ್ರ ರಾಷ್ಟ್ರದ ಗಮನ ಸೆಳೆದಿದೆ. ಈ ಕ್ಷೇತ್ರದಲ್ಲಿ ಗುರುವಾರ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರ ಮಂಗಳವಾರ ಸಂಜೆ ಮುಕ್ತಾಯವಾಯಿತು.

ಇದನ್ನೂ ಓದಿ : ಇನ್ಮುಂದೆ ರೈಲಿನಲ್ಲಿ ಮೊಬೈಲ್‌ ಹಾಗೂ ಎಲೆಕ್ಟ್ರಾನಿಕ್‌‌ ಉಪಕರಣಗಳ ಚಾರ್ಜಿಂಗ್ ನಿರ್ಬಂಧ : ಭಾರತೀಯ ರೈಲ್ವೆ -Vishwanews24

ನಾಮಪತ್ರ ಸಲ್ಲಿಕೆ ದಿನ ಕಾಲಿಗೆ ತೀವ್ರ ಗಾಯವಾಗಿದ್ದ ಮಮತಾ ಬ್ಯಾನರ್ಜಿ ವ್ಹೀಲ್‌ಚೇರ್‌ನಲ್ಲಿ ಕುಳಿತೇ ರಾಜ್ಯಾದ್ಯಂತ ಪ್ರಚಾರ ನಡೆಸಿದ್ದರು. ತಮ್ಮ ಪ್ರತಿ ಪ್ರಚಾರ ಭಾಷಣದಲ್ಲಿ, “ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ” ಎಂದು ಒತ್ತಿ ಹೇಳಿದ್ದರು.

ಅವರು ರಾಷ್ಟ್ರಗೀತೆ ವೇಳೆ ವ್ಹೀಲ್‌ಚೇರ್‌ನಿಂದ ಎದ್ದು ನಿಲ್ಲುವ ಮೂಲಕ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಇದನ್ನು ಮಾಸ್ಟರ್‌ಸ್ಟ್ರೋಕ್ ಎಂದು ಬಣ್ಣಿಸಲಾಗಿದೆ.

ಹತ್ತು ವರ್ಷದ ಹಿಂದೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾರಣವಾಗಿದ್ದ ನಂದಿಗ್ರಾಮ, 35 ವರ್ಷಗಳ ಎಡರಂಗ ಸರ್ಕಾರದ ಆಡಳಿತವನ್ನು ಕೊನೆಗೊಳಿಸಿತ್ತು. ಈ ಬಾರಿಯ ಚುನಾವಣೆ ಹೋರಾಟ ಅವರ ವೃತ್ತಿಜೀವನದಲ್ಲೇ ಕಠಿಣ ಹೋರಾಟ ಎಂದು ವಿಶ್ಲೇಷಿಸಲಾಗುತ್ತಿದೆ. ಸುವೇಂಧು ಅಧಿಕಾರಿಗೆ ನಂದಿಗ್ರಾಮವನ್ನು ಆಯ್ಕೆ ಮಾಡಿಕೊಳ್ಳುವುದು ಅನಿವಾರ್ಯವಾಗಿತ್ತು.

ಎಡರಂಗ ಸರ್ಕಾರ ಭೂಮಿಸ್ವಾಧೀನಪಡಿಸಿಕೊಂಡಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ತಳಮಟ್ಟದ ಸಂಘಟನೆ ಮಾಡಿದ್ದ ಸುವೇಂಧು ಅಧಿಕಾರಿ ತೀರಾ ಇತ್ತೀಚಿನವರೆಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ನಿಕಟವರ್ತಿಯಾಗಿದ್ದರು. ಇತ್ತೀಚೆಗೆ ಬಿಜೆಪಿ ಸೇರುವ ಮೂಲಕ ದೀದಿ ವಿರುದ್ಧ ಸಮರ ಸಾರಿದ್ದರು.

ಇದನ್ನೂ ಓದಿ :ಮಂಗಳೂರು:ಎ.1 ರಿಂದ ಕರಾವಳಿಯ ತಲಪಾಡಿ, ಹೆಜಮಾಡಿ, ಸಾಸ್ತಾನ ಟೋಲ್‌ ದರ ಏರಿಕೆ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago