ಜಾಗತಿಕ ತಾಪಮಾನ ಕೈಗಾರಿಕಾ ಕ್ರಾಂತಿ ಅವಧಿಯ ಹಿಂದಿನ ಮಟ್ಟ (ಪ್ರಿ ಇಂಡಸ್ಟ್ರಿಯಲ್ ಲೆವಲ್) ಕ್ಕಿಂತ 2 ಡಿಗ್ರಿ ಜಾಸ್ತಿಯಾದರೆ ಭಾರತಕ್ಕೆ ಈ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಪಿಸಿಸಿ ಹೇಳಿದೆ.
ನಾಗ್ಪುರ: ದೇಶದಲ್ಲಿಒಂದೆಡೆ ಭಾರಿ ಮಳೆಯಿಂದ ಪ್ರವಾಹವುಂಟಾಗಿ ಹಲವರ ಜೀವನ ದುಸ್ತರವಾಗಿದೆ. ಅಲ್ಲದೆ ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಭಾರಿ ಗಾಳಿ ಜತೆ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ಕೂಡ ನೀಡಲಾಗಿದೆ. ಇದರ ಜೊತೆಗೆ ಈಗ ದೇಶಕ್ಕೆ ಮತ್ತೊಂದು ಭೀತಿ ಎದುರಾಗಿದೆ.
2015ರಂತೆ ಈ ವರ್ಷ ಕೂಡ ದೇಶದಲ್ಲಿ ಮಾರಣಾಂತಿಕ ಬಿಸಿಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಬದಲಾವಣೆಯ ಬಗ್ಗೆ ನಡೆದ ಜಾಗತಿಕ ಮಟ್ಟದ ಅತಿ ದೊಡ್ಡ ಅವಲೋಕನ ವರದಿ ಬಹಿರಂಗಪಡಿಸಿದೆ.
2015ರಲ್ಲಿ ಬೀಸಿದ್ದ ಬಿಸಿಗಾಳಿಗೆ ಸುಮಾರು 2,500 ಜನರು ಬಲಿಯಾಗಿದ್ದರು. ಜಾಗತಿಕ ತಾಪಮಾನ ಕೈಗಾರಿಕಾ ಕ್ರಾಂತಿ ಅವಧಿಯ ಹಿಂದಿನ ಮಟ್ಟಕ್ಕಿಂತ 2 ಡಿಗ್ರಿ ಜಾಸ್ತಿಯಾದರೆ ಭಾರತಕ್ಕೆ ಈ ಅಪಾಯ ಕಟ್ಟಿಟ್ಟ ಬುತ್ತಿ ಎಂದು ವರದಿ ಹೇಳಿದೆ. ಇನ್ನು ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ಪೋಲೆಂಡ್ನಲ್ಲಿ ನಡೆಯಲಿರುವ ಕಟೋವೈಸ್ ಹವಾಮಾನ ಬದಲಾವಣೆ ಸಮಾವೇಶದಲ್ಲಿ ಈ ವಿಚಾರವನ್ನು ಚರ್ಚಿಸಲಾಗುವುದು. ಹವಾಮಾನ ಬದಲಾವಣೆಗಳನ್ನು ಎದುರಿಸಲು ಪ್ಯಾರಿಸ್ ಒಪ್ಪಂದದ ಪರಿಶೀಲನೆ ನಡೆಯಲಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಇಂಗಾಲ ಹೊರಸೂಸುವ ರಾಷ್ಟ್ರಗಳಲ್ಲಿ ಒಂದಾದ ಭಾರತವು ಜಾಗತಿಕ ಸಮ್ಮೇಳನದಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.
ತಾಪಮಾನದಲ್ಲಾಗುತ್ತಿರುವ ಏರಿಕೆಯ ಬಗ್ಗೆ ಎಚ್ಚರಿಕೆಯ ಕರೆ ಗಂಟೆಯನ್ನು ಬಾರಿಸುತ್ತಿರುವ ಜಾಗತಿಕ ತಾಪಮಾನ ಕುರಿತ ವಿಶೇಷ ವರದಿ, ಇದೇ ಗತಿಯಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದ್ದರೆ 2030- 2052ರೊಳಗೆ ತಾಪಮಾನ 1.5 ಡಿಗ್ರಿ ಸೆಲ್ಸಿಯಸ್ (ಪ್ರಿ ಇಂಡಸ್ಟ್ರಿಯಲ್ ಲೆವಲ್ ಮೀರಿ) ತಲುಪುವ ಅಪಾಯವಿದೆ ಎಂದು ಹೇಳಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…