ಜಾಗತಿಕ ತಾಪಮಾನ ಕೈಗಾರಿಕಾ ಕ್ರಾಂತಿ ಅವಧಿಯ ಹಿಂದಿನ ಮಟ್ಟ (ಪ್ರಿ ಇಂಡಸ್ಟ್ರಿಯಲ್ ಲೆವಲ್) ಕ್ಕಿಂತ 2 ಡಿಗ್ರಿ ಜಾಸ್ತಿಯಾದರೆ ಭಾರತಕ್ಕೆ ಈ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಪಿಸಿಸಿ ಹೇಳಿದೆ.
ನಾಗ್ಪುರ: ದೇಶದಲ್ಲಿಒಂದೆಡೆ ಭಾರಿ ಮಳೆಯಿಂದ ಪ್ರವಾಹವುಂಟಾಗಿ ಹಲವರ ಜೀವನ ದುಸ್ತರವಾಗಿದೆ. ಅಲ್ಲದೆ ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಭಾರಿ ಗಾಳಿ ಜತೆ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ಕೂಡ ನೀಡಲಾಗಿದೆ. ಇದರ ಜೊತೆಗೆ ಈಗ ದೇಶಕ್ಕೆ ಮತ್ತೊಂದು ಭೀತಿ ಎದುರಾಗಿದೆ.
2015ರಂತೆ ಈ ವರ್ಷ ಕೂಡ ದೇಶದಲ್ಲಿ ಮಾರಣಾಂತಿಕ ಬಿಸಿಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಬದಲಾವಣೆಯ ಬಗ್ಗೆ ನಡೆದ ಜಾಗತಿಕ ಮಟ್ಟದ ಅತಿ ದೊಡ್ಡ ಅವಲೋಕನ ವರದಿ ಬಹಿರಂಗಪಡಿಸಿದೆ.
2015ರಲ್ಲಿ ಬೀಸಿದ್ದ ಬಿಸಿಗಾಳಿಗೆ ಸುಮಾರು 2,500 ಜನರು ಬಲಿಯಾಗಿದ್ದರು. ಜಾಗತಿಕ ತಾಪಮಾನ ಕೈಗಾರಿಕಾ ಕ್ರಾಂತಿ ಅವಧಿಯ ಹಿಂದಿನ ಮಟ್ಟಕ್ಕಿಂತ 2 ಡಿಗ್ರಿ ಜಾಸ್ತಿಯಾದರೆ ಭಾರತಕ್ಕೆ ಈ ಅಪಾಯ ಕಟ್ಟಿಟ್ಟ ಬುತ್ತಿ ಎಂದು ವರದಿ ಹೇಳಿದೆ. ಇನ್ನು ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ಪೋಲೆಂಡ್ನಲ್ಲಿ ನಡೆಯಲಿರುವ ಕಟೋವೈಸ್ ಹವಾಮಾನ ಬದಲಾವಣೆ ಸಮಾವೇಶದಲ್ಲಿ ಈ ವಿಚಾರವನ್ನು ಚರ್ಚಿಸಲಾಗುವುದು. ಹವಾಮಾನ ಬದಲಾವಣೆಗಳನ್ನು ಎದುರಿಸಲು ಪ್ಯಾರಿಸ್ ಒಪ್ಪಂದದ ಪರಿಶೀಲನೆ ನಡೆಯಲಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಇಂಗಾಲ ಹೊರಸೂಸುವ ರಾಷ್ಟ್ರಗಳಲ್ಲಿ ಒಂದಾದ ಭಾರತವು ಜಾಗತಿಕ ಸಮ್ಮೇಳನದಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.
ತಾಪಮಾನದಲ್ಲಾಗುತ್ತಿರುವ ಏರಿಕೆಯ ಬಗ್ಗೆ ಎಚ್ಚರಿಕೆಯ ಕರೆ ಗಂಟೆಯನ್ನು ಬಾರಿಸುತ್ತಿರುವ ಜಾಗತಿಕ ತಾಪಮಾನ ಕುರಿತ ವಿಶೇಷ ವರದಿ, ಇದೇ ಗತಿಯಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದ್ದರೆ 2030- 2052ರೊಳಗೆ ತಾಪಮಾನ 1.5 ಡಿಗ್ರಿ ಸೆಲ್ಸಿಯಸ್ (ಪ್ರಿ ಇಂಡಸ್ಟ್ರಿಯಲ್ ಲೆವಲ್ ಮೀರಿ) ತಲುಪುವ ಅಪಾಯವಿದೆ ಎಂದು ಹೇಳಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…