Featured

ದೇಶಕ್ಕೆ ಸಮರ್ಥ ನಾಯಕತ್ವದ ಅಗತ್ಯವಿದೆ, ಬಲಿಷ್ಠ ಸರ್ಕಾರಕ್ಕಾಗಿ ಪ್ರಧಾನಿ ಮೋದಿಯನ್ನು ಬೆಂಬಲಿಸಿ : ಕೇಂದ್ರ ಸಚಿವ ರಾಮ್‍ವಿಲಾಸ್ ಪಾಸ್ವಾನ್ – Vishwanews24

ಬೆಂಗಳೂರು, :ಬಲಿಷ್ಠ ನಾಯಕತ್ವ ಮತ್ತು ಬಲಿಷ್ಠ ಸರ್ಕಾರಕ್ಕಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶದ ಮತದಾರರು ಪ್ರಧಾನಿ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಮುಂದಾಗಬೇಕು ಎಂದು ಕೇಂದ್ರ ಸಚಿವ ರಾಮ್‍ವಿಲಾಸ್ ಪಾಸ್ವಾನ್ ಜನತೆಗೆ ಕರೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ”ದೇಶಕ್ಕೆ ಸಮರ್ಥ ನಾಯಕತ್ವದ ಅಗತ್ಯವಿದೆ. ಅದಕ್ಕೆ ಮೋದಿಯವರೇ ಸೂಕ್ತ ವ್ಯಕ್ತಿ. ಭಾರತದ ಗಡಿ ದೇಶಗಳ ಪೈಕಿ ಹೆಚ್ಚಿನವು ನಮಗೆ ವೈರಿಗಳಾಗಿವೆ. ಇಂಥ ಸನ್ನಿವೇಶದಲ್ಲಿ ಸ್ಥಿರ ಸರಕಾರದ ಅವಶ್ಯಕತೆಯೂ ಇದೆ,”ಎಂದರು.

ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದೂ ಸಣ್ಣ ಭ್ರಷ್ಟಾಚಾರಕ್ಕೂ ಅವಕಾಶ ನೀಡದೆ ದೇಶವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಬೇಕು. ಹಾಗಾಗಿ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟವನ್ನು ಬೆಂಬಲಿಸುವಂತೆ ಕರೆ ಕೊಟ್ಟರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನಮ್ಮ ಸುತ್ತಮುತ್ತ ವೈರಿಗಳೇ ತುಂಬಿ ತುಳುಕುತ್ತಿದ್ದಾರೆ.

130 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಂತಹ ಬೃಹತ್ ರಾಷ್ಟ್ರವನ್ನು ಮೋದಿಯಂತಹ ಸಮರ್ಥ ನಾಯಕರು ಮುನ್ನೆಡೆಸಬಲ್ಲರೇ ಹೊರತು ಬೇರೊಬ್ಬರಿಂದ ಅದು ಸಾಧ್ಯವಿಲ್ಲ. ನಮ್ಮ ಸರ್ಕಾರ ಸ್ಪಷ್ಟ ಜನಾದೇಶದೊಂದಿಗೆ ಎರಡನೇ ಬಾರಿಗೆ ಅಧಿಕಾರ ಹಿಡಿಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

”ರಾಹುಲ್‌ ಗಾಂಧಿ ಅವರನ್ನು ಸ್ವೀಕರಿಸಲು ಯಾರೂ ಸಿದ್ಧರಿಲ್ಲ. ಕಾಂಗ್ರೆಸ್‌ ಪಕ್ಷ ತನ್ನ ರಾಜಕೀಯ ವಿರೋಧಿಗಳು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ಮೊರಾರ್ಜಿ ಸರಕಾರ ರಚನೆಯಾದಾಗಲೇ ಅದನ್ನು ಅಸ್ಥಿರಗೊಳಿಸಿದ್ದರು. ತೃತೀಯ ರಂಗ ಸರಕಾರಕ್ಕೂ ಕಾಟ ನೀಡಿದರು. ಅಟಲ್‌ಜಿ ಸರಕಾರವೊಂದೇ ಪೂರ್ಣಾವಧಿ ಪೂರೈಸಿದರೂ ಅಸ್ಥಿರಕ್ಕೆ ನಿರಂತರ ಪ್ರಯತ್ನ ನಡೆಯಿತು. ದೇಶಕ್ಕೆ ಕಾಂಗ್ರೆಸ್‌ ಮಾಡಿದ್ದೇನು ಎನ್ನುವುದು ಜನತೆಗೆ ಗೊತ್ತಿದೆ,” ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago