Featured

ದೇಶದಲ್ಲಿರುವುದು ಒಂದೇ ಒಂದು ಹಿಂದುತ್ವ, ಅದೇ ಶಾಶ್ವತವಾಗಿರಲಿದೆ : ಮೋಹನ್‌ ಭಾಗವತ್‌ – Vishwanews24

ದೇಶದಲ್ಲಿರುವುದು ಒಂದೇ ಒಂದು ಹಿಂದುತ್ವ, ಅದೇ ಶಾಶ್ವತವಾಗಿರಲಿದೆ..

ಮುಸ್ಲಿಮರಲ್ಲೂಅಪಾರ ದೇಶಭಕ್ತಿ ಇರುವವರು ಇದ್ದಾರೆ, ಅಂಥವರಿಗೆ ಗೌರವ ಸಿಗಬೇಕು..

ನವದೆಹಲಿ: ಸಾವರ್ಕರ್‌ ಹಿಂದುತ್ವ, ವಿವೇಕಾನಂದರ ಹಿಂದುತ್ವ ಎನ್ನುವ ಭಿನ್ನತೆಗಳಿಲ್ಲ. ದೇಶದಲ್ಲಿರುವುದು ಒಂದೇ ಒಂದು ಹಿಂದುತ್ವ, ಅದೇ ಶಾಶ್ವತವಾಗಿರಲಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

ಸಾವರ್ಕರ್‌ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿಂದುತ್ವವನ್ನು ಮನಸ್ಸಿಗೆ ಬಂದಂತೆ ವಿಶ್ಲೇಷಿಸಲು ಸಾಧ್ಯವಿಲ್ಲ. ಸ್ವಾತಂತ್ರ್ಯ ಬಂದ ನಂತರದಿಂದಲೂ ಸಾವರ್ಕರ್‌ ಅವರ ಬಗ್ಗೆ ಅಪಪ್ರಚಾರ ನಡೆಸಲು ದೊಡ್ಡ ಸಂಚು ನಡೆದಿದೆ. ಸಾವರ್ಕರ್ ಮುಸ್ಲಿಂ ವಿರೋಧಿಯಲ್ಲ. ಗಾಂಧೀಜಿ ಅವರು ದೇಶಕ್ಕೆ ಅಗತ್ಯ ಎಂಬ ಹೇಳಿಕೆಯನ್ನು ಕೂಡ ಅವರು ಕೊಟ್ಟಿದ್ದರು.

ಇನ್ನು ರಸ್ತೆಗಳು, ಪುರಾತನ ಕಟ್ಟಡಗಳು, ಊರುಗಳಿಗೆ ಇರಿಸಲಾಗಿದ್ದ ಮುಸ್ಲಿಂ ಸಮುದಾಯದ ವ್ಯಕ್ತಿಗಳು, ರಾಜರ ಹೆಸರನ್ನು ವಿವಿಧ ರಾಜ್ಯಗಳಲ್ಲಿ ಬದಲಾವಣೆ ಮಾಡಲಾಗುತ್ತಿರುವ ಬಗ್ಗೆ ಸಾವರ್ಕರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಲ್ಲೂಅಪಾರ ದೇಶಭಕ್ತಿ ಇರುವವರು ಇದ್ದಾರೆ. ಅಂಥವರಿಗೆ ಗೌರವ ಸಿಗಬೇಕು ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

1 hour ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

2 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

2 hours ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

2 hours ago

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

3 hours ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

3 hours ago