ಬೆಂಗಳೂರು: ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರ. ಅದಕ್ಕೆ ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವ ಶಕ್ತಿ ಇದೆ. ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರವಾಗಿದ್ದು, ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದರು.
ಯಾರು ಕೂಡ ಈ ದೇಶದಲ್ಲಿ ಭಾರತ್ ಜೋಡೋ ಮಾಡಿರಲಿಲ್ಲ. ಈಗ ಭಾರತ್ ಜೋಡೋ.2 ಪ್ರಾರಂಭ ಮಾಡ್ತಿದ್ದಾರೆ. ಭಾರತ ನ್ಯಾಯ ಯಾತ್ರೆ ಮಾಡ್ತಿದ್ದಾರೆ. ಯಾಕಂದ್ರೆ ಈ ದೇಶದಲ್ಲಿ ಯಾರಿಗೂ ನ್ಯಾಯ ಸಿಕ್ಕಿಲ್ಲ. ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಸಿಗಬೇಕು ಅಂತ ಪಾದಯಾತ್ರೆ ಮಾಡ್ತಿದ್ದಾರೆ. ಇಂತವರ ಕೈಗೆ ಅಧಿಕಾರ ಸಿಗಬೇಕೋ ನರೇಂದ್ರ ಮೋದಿಗೆ ಅಧಿಕಾರ ಸಿಗಬೇಕೋ..?. ಹಾಗಾಗಿ ನಾವು ಎಲ್ಲರೂ ಹೋರಾಟ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದು ಒತ್ತಿ ಹೇಳಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…