ಹುಬ್ಬಳ್ಳಿ: ದೇಶದಲ್ಲಿ ಅಶಾಂತಿಯನ್ನು ಹುಟ್ಟು ಹಾಕುವ ಎಐಎಂಐಎಂ, ಎಸ್ಡಿಪಿಐ, ಆರೆಸ್ಸೆಸ್, ಭಜರಂಗದಳ ಎಲ್ಲವನ್ನೂ ಬ್ಯಾನ್ ಮಾಡಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರ ಅಶಾಂತಿಯನ್ನುಂಟು ಮಾಡುವ ಯಾವುದೇ ಸಂಘಟನೆಯಾಗಿದ್ದರೂ ಬ್ಯಾನ್ ಮಾಡಲಿ. ಅದರಲ್ಲಿ ಎಐಎಂಐಎಂ, ಎಸ್ಡಿಪಿಐ, ಆರೆಸ್ಸೆಸ್, ಭಜರಂಗದಳ ಎಲ್ಲವನ್ನೂ ಬ್ಯಾನ್ ಮಾಡಲಿ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಗೃಹ ಸಚಿವ ಸ್ಥಾನಕ್ಕೆ ಆರಗ ಜ್ಞಾನೇಂದ್ರ ಅನರ್ಹನಾಗಿದ್ದಾನೆ. ನಿಭಾಯಿಸಲು ಆಗದೇ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ. ರಾಜ್ಯದಲ್ಲಿ ಗೊಂದಲವನ್ನುಂಟು ಮಾಡುವ ಹೇಳಿಕೆ ನೀಡುವ ಮೂಲಕ ಗೃಹ ಸಚಿವ ಸ್ಥಾನದ ಮರ್ಯಾದೆ ತೆಗೆಯುತ್ತಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಿದ್ಧರಾಮಯ್ಯ ಹರಿಹಾಯ್ದರು.
40% ಕಮೀಷನ್ ದಂಧೆಯ ಕುರಿತು ಮಾತನಾಡಿ, ಈಗಾಗಲೇ ಈ ಬಗ್ಗೆ ಸಾಕಷ್ಟು ಮಾತನಾಡಿದ್ದೇವೆ. ಈಗ ಜನರ ಕೈಯಲ್ಲಿಯೇ ಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಅವರೇ ತಕ್ಕ ಉತ್ತರವನ್ನು ನೀಡುವ ಮೂಲಕ ಜನರು ಇದಕ್ಕೆ ತಕ್ಕ ಪಾಠ ಕಲಿಸಬೇಕಿದೆ ಎಂದು ಅವರು ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…