ದೇಶದಲ್ಲಿ ಈಗ ಹೋರಾಟ ನಡೆಯುತ್ತಿದೆ, ಈ ಹೋರಾಟದಲ್ಲಿ ನಮಗೆ ಜಯ ಸಿಕ್ಕೆ ಸಿಗಲಿದೆ : ಸಿದ್ದರಾಮಯ್ಯ -Vishwanews24

ವಿಜಯಪುರ: ಶ್ರೀಮಂತರು, ಬಡವರ ಮಧ್ಯೆ ಅಂತರ ಹಾಗೆಯೇ ಮುಂದುವರಿಯಲಿ, ಧರ್ಮ ಸಂಘರ್ಷ ನಡೆಯಲಿ ಎಂಬುದು ಬಿಜೆಪಿಯವರ ಉದ್ದೇಶ ಎಂದು ಮಾಜಿ ಸಿಎಂ ಸಿದ್ದರಾಮಯ್ಯ   ಹೇಳಿದ್ದಾರೆ.

ದೇಶದಲ್ಲಿ ಈಗ ಹೋರಾಟ ನಡೆಯುತ್ತಿದೆ. ಬ್ರಿಟಿಷರ ವಿರುದ್ಧ ಭಾರತೀಯರಿಗೆ ಜಯ ಸಿಕ್ಕಂತೆ ಈ ಹೋರಾಟದಲ್ಲಿ ನಮಗೆ ಜಯ ಸಿಕ್ಕೆ ಸಿಗಲಿದೆ. ಇಲ್ಲಿ ಯಾರಿಗೂ ಮಾನವೀಯತೆ ಇಲ್ಲ. ಯಾರನ್ನಾದರೂ ಕೊಂದು ಹಾಕುತ್ತಾರೆ. ಮಂಗಳೂರಿನಲ್ಲಿ ಪೊಲೀಸರು ದುರುದ್ದೇಶದಿಂದ ಇಬ್ಬರು ಅಮಾಯಕ ಯುವಕರನ್ನು ಕೊಂದುಹಾಕಿದರು. ಇದು ಕರ್ನಾಟಕ ಮಾತ್ರವಲ್ಲ, ದೇಶಾದ್ಯಂತ ನಡೆಯುತ್ತಿದೆ. ದೇಶದಲ್ಲಿ ಭಯದ ವಾತಾವರಣ ಸೃಷ್ಠಿಸಲಾಗುತ್ತಿದೆ. ಈವರೆಗೆ ದೇಶಾದ್ಯಂತ 100 ಜನ ಸಾವಿಗೀಡಾಗಿದ್ದಾರೆ. ಮೋದಿ ಸೇರಿದಂತೆ ಯಾರಿಂದಲೂ ಹೋರಾಟ ತಡೆಯಲು ಸಾಧ್ಯವಿಲ್ಲ. ಸಿಎಎ ವಿರೋಧಿಗಳು ನಗರ ನಕ್ಸಲ್, ದೇಶ ವಿರೋಧಿಗಳು ಎಂದು ಬಿಂಬಿಸುತ್ತೀರ ಎಂದು ಪ್ರಶ್ನೆ ಮಾಡಿದರು.

ಸಂವಿಧಾನ ರದ್ದು ಮಾಡಲು ಬಿಜೆಪಿಯವರು ಏನಾದರೂ ಕೈ ಹಾಕಿದರೆ ಈ ದೇಶದಲ್ಲಿ ರಕ್ತಕ್ರಾಂತಿ ಆಗುತ್ತದೆ. ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಈ ರೀತಿಯ ಹೋರಾಟಗಳು ನಡೆಯುತ್ತಿದ್ದವು. ಭಾರತೀಯ ಪೌರತ್ವ ಕಾಯ್ದೆಗೆ ತಿದ್ದುಪಡಿಯಾದಾಗಿನಿಂದ ದೇಶಾದ್ಯಂತ ಜನ ಸಿಡಿದೆದ್ದಿದ್ದಾರೆ. ಜನರು ಸಾಮೂಹಿಕವಾಗಿ ಹೋರಾಟ ನಡೆಸುತ್ತಿದ್ದಾರೆ. ಇದನ್ನು ನೋಡಿದರೆ ಈಗ ಮತ್ತೊಂದು ಸ್ವಾತಂತ್ರ್ಯ ಹೋರಾಟ ನಡೆಯುತ್ತಿದೆ ಎಂದರು.

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸರ್ಕಾರಕ್ಕೆ ಎಷ್ಟೇ ಬಹುಮತವಿರಲಿ. ಸಂವಿಧಾನ ಬಾಹಿರ ಕಾನೂನು ಮಾಡಿದರೆ ಸಾರ್ವಜನಿಕರು ಹೋರಾಟ ಮಾಡುವ ಹಕ್ಕನ್ನು ಅಂಬೇಡ್ಕರ್ ನೀಡಿದ್ದಾರೆ. ಈ ಹಕ್ಕನ್ನು ದಮನ ಮಾಡಲು ಮೋದಿ, ಶಾಗೆ ಯಾವುದೇ ಅಧಿಕಾರವಿಲ್ಲ ಎಂದರು.

ವಿಶ್ವ ಶ್ರೇಷ್ಠ ಸಂವಿಧಾನವನ್ನು ಬುಡಮೇಲು ಮಾಡಲು ಬಿಜೆಪಿ ಹೊರಟಿದೆ. ಈ ಸಂವಿಧಾನದ ಮೂಲಕ ಕಲ್ಪಿಸಲಾಗಿರುವ ಸಮಾನತೆಯ ವಿರುದ್ಧ ಬಿಜೆಪಿಗೆ ಸಿಟ್ಟಿದೆ. ಒಂದು ವೇಳೆ ಸಂವಿಧಾನ ರದ್ದು ಮಾಡಲು ಬಿಜೆಪಿ ಕೈ ಹಾಕಿದರೆ ದೇಶದಲ್ಲಿ ರಕ್ತಕ್ರಾಂತಿ ನಡೆಯಲಿದೆ. ವಾಜಪೇಯಿ ಪ್ರಧಾನಿಯಾಗಿದ್ದರೂ ಹಿಡನ್ ಅಜೆಂಡಾ ಜಾರಿ ಮಾಡಲಿಲ್ಲ. ಆದರೆ ಇಂದು ಮೋದಿ, ಶಾ ಹಿಡನ್ ಅಜೆಂಡಾ ಜಾರಿ ಮೂಲಕ ಸಂವಿಧಾನ ಬುಡಮೇಲು ಮಾಡಲು ಹೊರಟಿದ್ದಾರೆ. ಸಂವಿಧಾನ ಪರ ಮತ್ತು ವಿರೋಧಿಗಳ ನಡುವೆ ಈಗ ಹೋರಾಟ ನಡೆಯುತ್ತಿದೆ. ಬಿಜೆಪಿಯವರು ಪರಿವರ್ತನೆ ವಿರೋಧಿಗಳು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago