ಬೆಂಗಳೂರು, : “ದೇಶದಲ್ಲಿ ಎಲ್ಲೆಡೆ ಒಂದೇ ಕಾಲದಲ್ಲಿ ಲಸಿಕೆ ಬಿಡುಗಡೆಯಾಗಿದೆ. ಇಂದು ಐತಿಹಾಸಿಕ ಲಸಿಕಾ ಆಂದೋಲನದ ದಿನವಾಗಿದೆ” ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, “243 ಕಡೆಗಳಲ್ಲಿ ಏಕಕಾಲಕ್ಕೆ ಲಸಿಕೆ ನೀಡುವ ಕೆಲಸ ಪ್ರಾರಂಭವಾಗಲಿದೆ. ಸುಮಾರು 24,300 ಮಂದಿಗೆ ಒಂದೇ ಜಾಗದಲ್ಲಿ ಲಸಿಕೆ ನೀಡಲಾಗುತ್ತದೆ. ಪ್ರತಿಯೋರ್ವರು ಕೂಡಾ ಸಂಪೂರ್ಣ ವಿಶ್ವಾಸದಿಂದ ಲಸಿಕೆ ತೆಗೆದುಕೊಂಡು, ಆರೋಗ್ಯ ಕಾಪಾಡಿಕೊಳ್ಳಿ. ಕೊರೊನಾ ವೈರಸ್ನಿಂದ ಶಾಶ್ವತವಾದ ಪರಿಹಾರ ಸಿಗುತ್ತದೆ. ನಮ್ಮ ದೇಶದ ವಿಜ್ಞಾನಿಗಳು ಲಸಿಕೆ ಕಂಡುಹಿಡಿದಿರುವುದು ನಮ್ಮ ದೇಶದ ಹೆಮ್ಮೆಯಾಗಿದೆ” ಎಂದರು.
“ಇಷ್ಟು ಬೇಗ ನಮ್ಮ ವಿಜ್ಞಾನಿಗಳು ಕೊರೊನಾ ಲಸಿಕೆ ಕಂಡುಹಿಡಿಯುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಕೆಲವೊಂದು ವೈರಸ್ಗಳಿಗೆ ವ್ಯಾಕ್ಸಿನ್ ಕಂಡುಹಿಡಿಯಲು ಸುಮಾರು 9-25 ವರ್ಷ ತೆಗೆದುಕೊಂಡರೂ ಕೂಡಾ ಸಾಧ್ಯವಾಗುತ್ತಿರಲಿಲ್ಲ. ಆದರೆ, ಒಂದು ವರ್ಷದೊಳಗೆ ಕೊರೊನಾಗೆ ಲಸಿಕೆ ಕಂಡುಹಿಡಿದಿರುವುದು ಹೆಮ್ಮೆಯ ವಿಚಾರ” ಎಂದು ಹೇಳಿದರು.
http://ರಾಜ್ಯದಲ್ಲಿ ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ -Vishwanews24
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…