Featured

ದೇಶದಲ್ಲಿ ಒಂದು ಕೋಟಿ ದಾಟಿದ ಕೊರೊನಾ ಸೋಂಕು ಪ್ರಕರಣ -Vishwanews24

ದೇಶದಲ್ಲಿ ಒಂದು ಕೋಟಿ ದಾಟಿದ ಕೊರೊನಾ ಸೋಂಕು ಪ್ರಕರಣ -Vishwanews24

ನವದೆಹಲಿ,  : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರವಾಗಿ ಭಾರತವು ಶನಿವಾರ 25,152 ಹೊಸ ಕೊರೊನಾ ಸೋಂಕು ಪ್ರಕರಣಗಳನ್ನು ಹಾಗೂ 347 ಕೊರೊನಾ ಸಾವನ್ನು ದಾಖಲಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಒಂದು ಕೋಟಿ ದಾಟಿದ್ದು ದೇಶದಲ್ಲಿ ಒಟ್ಟು 1,00,04,599 ಜನರಿಗೆ ಸೋಂಕು ದೃಢಪಟ್ಟಿದೆ. ಈವರೆಗೆ 1,45,136 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಐದು ತಿಂಗಳುಗಳಲ್ಲಿ 10 ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗಿದ್ದು ಆಗಸ್ಟ್‌ನಿಂದ ಅಕ್ಟೋಬರ್‌ವರೆಗಿನ ಮೂರು ತಿಂಗಳಲ್ಲೇ 60 ಲಕ್ಷಕ್ಕೆ ಕೊರೊನಾ ಪ್ರಕರಣಗಳು ಏರಿಕೆಯಾಗಿದೆ.

ನವೆಂಬರ್ 9 ರಂದು ಒಂದು ಕೋಟಿ ಕೊರೊನಾ ಪ್ರಕರಣವನ್ನು ದಾಖಲಿಸಿಕೊಂಡಿರುವ ಅಮೇರಿಕಾದ ಬಳಿಕ ಭಾರತವು ಈ ವರ್ಷದ ಆಗಸ್ಟ್‌ನಿಂದ ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ದೇಶವಾಗಿದೆ.

ಇನ್ನು ಏತನ್ಮಧ್ಯೆ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು ಚೇತರಿಕೆ ಪ್ರಮಾಣವು 95.46 ಶೇಕಡ ಹಾಗೂ ಸಾವಿನ ಪ್ರಮಾಣವು 1.45 ಶೇಕಡವಾಗಿದೆ. ಕಳೆದ 12 ದಿನಗಳಿಂದ ಸಕ್ರಿಯ ಪ್ರಕರಣಗಳು ನಾಲ್ಕು ಲಕ್ಷಕ್ಕಿಂತ ಕಡಿಮೆಯಿದೆ. ಜಾಗತಿಕವಾಗಿ ಅತೀ ಹೆಚ್ಚು ಚೇತರಿಕೆ ಪ್ರಮಾಣ ಹೊಂದಿರುವ ದೇಶಗಳ ಪೈಕಿ ಒಂದಾಗಿದೆ.

ಆರೋಗ್ಯ ಸಚಿವಾಲಯದ ಪ್ರಕಾರ, ಸಕ್ರಿಯ ಪ್ರಕರಣಗಳು ಮತ್ತು ಚೇತರಿಸಿಕೊಂಡ ಪ್ರಕರಣಗಳ ನಡುವಿನ ಅಂತರವು ನಿರಂತರವಾಗಿ ಅಧಿಕಾವಾಗುತ್ತಿದೆ. ಈವರೆಗೆ 95,50,712 ಜನರು ಗುಣಮುಖರಾಗಿದ್ದರೆ, 3,08,751 ಜನರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 16,00,90,514 ಮಾದರಿಗಳನ್ನು ಪರೀಕ್ಷಿಸಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago