ರಾಯಚೂರು : ದೇಶದಲ್ಲಿ ಇಂದಿರಾ ಗಾಂಧಿ ತಂದಿದ್ದ ತುರ್ತು ಸ್ಥಿತಿಗಿಂತಲೂ ಕರಾಳ ಸ್ಥಿತಿ ಈಗ ನಿರ್ಮಾಣವಾಗಿದೆ ಎಂದು ಭ್ರಷ್ಟಾಚಾರಿ ವಿರೋಧಿ ಹೋರಾಟಗಾರ ಎಸ್.ಆರ್. ಹಿರೇಮಠ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘ ಪರಿವಾರ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ತುರ್ತುಸ್ಥಿತಿಗಿಂತಲೂ 20 ಪಟ್ಟು ಹೆಚ್ಚು ಭೀಕರ ಸ್ಥಿತಿ ಇದೆ. ಸಂಘ ಪರಿವಾರದ ಆಡಳಿತದಲ್ಲಿ ನಡೆದಿರುವ ಹಿಂಸಾಚಾರ ಘಟನೆಗಳ ಕುರಿತು 13 ಪುಟಗಳ ಹೊತ್ತಿಗೆಯನ್ನು ರಾಷ್ಟ್ರಪತಿಯವರಿಗೆ ನೀಡಿ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಜಮ್ಮುಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ 370 ವಿಧಿ ರದ್ದು ಕಾನೂನು ವಿರೋಧಿಯಾಗಿದೆ. 370 ವಿಧಿ ಜಾರಿ ಇದ್ದಾಗ ಕಾಶ್ಮೀರದಲ್ಲಿ ಸಾಕಷ್ಟು ಕೆಲಸವಾಗಿದೆ. 370 ವಿಧಿ ಹೋಗಬೇಕಿತ್ತು. ಆದರೆ, ಗನ್ ಹಿಡಿದು ಅದನ್ನು ತೆಗೆದುಹಾಕಿದ್ದು ಸರಿಯಲ್ಲ ಎಂದು ಟೀಕಿಸಿದರು. ದೇಶದಲ್ಲಿ ತುರ್ತುಸ್ಥಿತಿಗಿಂತಲೂ ಈಗ ಕರಾಳ ಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರದ ವಿರುದ್ಧ ಎಸ್.ಆರ್. ಹಿರೇಮಠ ವಾಗ್ದಾಳಿ ನಡೆಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…