ರಾಯಚೂರು : ದೇಶದಲ್ಲಿ ಇಂದಿರಾ ಗಾಂಧಿ ತಂದಿದ್ದ ತುರ್ತು ಸ್ಥಿತಿಗಿಂತಲೂ ಕರಾಳ ಸ್ಥಿತಿ ಈಗ ನಿರ್ಮಾಣವಾಗಿದೆ ಎಂದು ಭ್ರಷ್ಟಾಚಾರಿ ವಿರೋಧಿ ಹೋರಾಟಗಾರ ಎಸ್.ಆರ್. ಹಿರೇಮಠ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘ ಪರಿವಾರ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ತುರ್ತುಸ್ಥಿತಿಗಿಂತಲೂ 20 ಪಟ್ಟು ಹೆಚ್ಚು ಭೀಕರ ಸ್ಥಿತಿ ಇದೆ. ಸಂಘ ಪರಿವಾರದ ಆಡಳಿತದಲ್ಲಿ ನಡೆದಿರುವ ಹಿಂಸಾಚಾರ ಘಟನೆಗಳ ಕುರಿತು 13 ಪುಟಗಳ ಹೊತ್ತಿಗೆಯನ್ನು ರಾಷ್ಟ್ರಪತಿಯವರಿಗೆ ನೀಡಿ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಜಮ್ಮುಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ 370 ವಿಧಿ ರದ್ದು ಕಾನೂನು ವಿರೋಧಿಯಾಗಿದೆ. 370 ವಿಧಿ ಜಾರಿ ಇದ್ದಾಗ ಕಾಶ್ಮೀರದಲ್ಲಿ ಸಾಕಷ್ಟು ಕೆಲಸವಾಗಿದೆ. 370 ವಿಧಿ ಹೋಗಬೇಕಿತ್ತು. ಆದರೆ, ಗನ್ ಹಿಡಿದು ಅದನ್ನು ತೆಗೆದುಹಾಕಿದ್ದು ಸರಿಯಲ್ಲ ಎಂದು ಟೀಕಿಸಿದರು. ದೇಶದಲ್ಲಿ ತುರ್ತುಸ್ಥಿತಿಗಿಂತಲೂ ಈಗ ಕರಾಳ ಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರದ ವಿರುದ್ಧ ಎಸ್.ಆರ್. ಹಿರೇಮಠ ವಾಗ್ದಾಳಿ ನಡೆಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…