ಬೆಂಗಳೂರು: ನಾವು ದೇಶದಲ್ಲಿ ಮೋದಿಯವರ ನಾಯಕತ್ವ, ರಾಜ್ಯದಲ್ಲಿ ಯಡಿಯೂರಪ್ಪ ಅವರ ಸ್ಥಿರ ಸರ್ಕಾರವನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಬಿಜೆಪಿಗೆ ಸೇರ್ಪಡೆಯಾದ ಚಿಕ್ಕಬಳ್ಳಾಪುರದ ಮಾಜಿ ಶಾಸಕ ಕೆ ಸುಧಾಕರ್ ಹೇಳಿದ್ದಾರೆ.
ಬಿಜೆಪಿ ಸೇರ್ಪಡೆ ನಂತರ ಮಾತನಾಡಿದ ಡಾ.ಕೆ ಸುಧಾಕರ್, ಈ ಹಿಂದೆ ರಾಜ್ಯದಲ್ಲಿ ಬಿಜೆಪಿಯನ್ನು ದೂರ ಇಡುವ ಏಕೈಕ ಉದ್ದೇಶದಿಂದ ಮೈತ್ರಿ ಮಾಡಿಕೊಳ್ಳಲಾಯಿತು. ಹೀಗಾಗಿ ನಮ್ಮ ಮನಸ್ಸುಗಳು ಒಗ್ಗೂಡಲೇಯಿಲ್ಲ. ಈಗ ಮೈತ್ರಿ ಸರ್ಕಾರ ಪತನವಾದ ಮೇಲೆ ಎರಡೂ ಪಕ್ಷಗಳ ನಾಯಕರು ಬೀದಿಯಲ್ಲಿ ವ್ಯಾಜ್ಯ ಮಾಡುತ್ತಿದ್ದಾರೆ ಎಂದರು.
ನಾವೆಲ್ಲಾ ಯಾರದೋ ಕೃಪೆಯಿಂದ ಗೆದ್ದವರಲ್ಲ. ಜನರ ಬೆಂಬಲ ಹಾಗೂ ಸ್ವಯಂ ಕೃಷಿಯಿದೆ. ನಮಗೆ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಹೀಗಾಗಿ ಕುರ್ಚಿ ಇದ್ದರೆಷ್ಟು ಇಲ್ಲದಿದ್ದರೆಷ್ಟು. ನಾವು ಒಳ್ಳೆಯ ಉದ್ದೇಶಕ್ಕೆ ಬಿಜೆಪಿಯನ್ನು ಸೇರಿದ್ದೇವೆ ಎಂದು ಅಭಿಪ್ರಾಯಪಟ್ಟರು.
ಈ ದೇಶದಲ್ಲಿ ರಮೇಶ್ ಕುಮಾರ್ ಅವರಂತಹ ಸ್ಪೀಕರ್ ಭವಿಷ್ಯದಲ್ಲಿ ಯಾರೂ ಬರಬಾರದು. ಈ ಸರ್ಕಾರದ ಭವಿಷ್ಯ ಚುನಾವಣೆಯ ಫಲಿತಾಂಶದ ಮೇಲೆ ನಿಂತಿದೆ. ಇನ್ನೂ ಮೂರು ವರ್ಷ ಸ್ಥಿರ ಸರ್ಕಾರ ನಡೆದು ದೇಶದಲ್ಲಿ ಕರ್ನಾಟಕ ನಂಬರ್ ಒನ್ ಮಾಡಲು ಹಾಗೂ ದಕ್ಷಿಣ ದ ಇತರ ರಾಜ್ಯಗಳಿಗೆ ಬಿಜೆಪಿ ವಿಸ್ತರಿಸಲು ಎಲ್ಲರೂ ಶ್ರಮಿಸಬೇಕು ಎಂದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…