Featured

ದೇಶದಲ್ಲಿ ಕರ್ನಾಟಕ ನಂಬರ್ ಒನ್ ಮಾಡಲು ಹಾಗೂ ಇತರ ರಾಜ್ಯಗಳಿಗೆ ಬಿಜೆಪಿ ವಿಸ್ತರಿಸಲು ಎಲ್ಲರೂ ಶ್ರಮಿಸಬೇಕು : ಕೆ ಸುಧಾಕರ್ -Vishwanews24

ಬೆಂಗಳೂರು: ನಾವು ದೇಶದಲ್ಲಿ ಮೋದಿಯವರ ನಾಯಕತ್ವ, ರಾಜ್ಯದಲ್ಲಿ ಯಡಿಯೂರಪ್ಪ ಅವರ ಸ್ಥಿರ ಸರ್ಕಾರವನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಬಿಜೆಪಿಗೆ ಸೇರ್ಪಡೆಯಾದ ಚಿಕ್ಕಬಳ್ಳಾಪುರದ ಮಾಜಿ ಶಾಸಕ ಕೆ ಸುಧಾಕರ್ ಹೇಳಿದ್ದಾರೆ.

ಬಿಜೆಪಿ ಸೇರ್ಪಡೆ ನಂತರ ಮಾತನಾಡಿದ ಡಾ.ಕೆ ಸುಧಾಕರ್, ಈ ಹಿಂದೆ  ರಾಜ್ಯದಲ್ಲಿ ಬಿಜೆಪಿಯನ್ನು ದೂರ ಇಡುವ ಏಕೈಕ ಉದ್ದೇಶದಿಂದ ಮೈತ್ರಿ ಮಾಡಿಕೊಳ್ಳಲಾಯಿತು. ಹೀಗಾಗಿ ನಮ್ಮ ಮನಸ್ಸುಗಳು ಒಗ್ಗೂಡಲೇಯಿಲ್ಲ. ಈಗ ಮೈತ್ರಿ ಸರ್ಕಾರ ಪತನವಾದ ಮೇಲೆ ಎರಡೂ ಪಕ್ಷಗಳ ನಾಯಕರು ಬೀದಿಯಲ್ಲಿ ವ್ಯಾಜ್ಯ ಮಾಡುತ್ತಿದ್ದಾರೆ ಎಂದರು.

ನಾವೆಲ್ಲಾ ಯಾರದೋ ಕೃಪೆಯಿಂದ ಗೆದ್ದವರಲ್ಲ. ಜನರ ಬೆಂಬಲ ಹಾಗೂ ಸ್ವಯಂ ಕೃಷಿಯಿದೆ. ನಮಗೆ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಹೀಗಾಗಿ ಕುರ್ಚಿ ಇದ್ದರೆಷ್ಟು ಇಲ್ಲದಿದ್ದರೆಷ್ಟು. ನಾವು ಒಳ್ಳೆಯ ಉದ್ದೇಶಕ್ಕೆ ಬಿಜೆಪಿಯನ್ನು ಸೇರಿದ್ದೇವೆ ಎಂದು ಅಭಿಪ್ರಾಯಪಟ್ಟರು.

ಈ ದೇಶದಲ್ಲಿ ರಮೇಶ್ ಕುಮಾರ್ ಅವರಂತಹ ಸ್ಪೀಕರ್ ಭವಿಷ್ಯದಲ್ಲಿ ಯಾರೂ ಬರಬಾರದು. ಈ ಸರ್ಕಾರದ ಭವಿಷ್ಯ ಚುನಾವಣೆಯ ಫಲಿತಾಂಶದ ಮೇಲೆ ನಿಂತಿದೆ. ಇನ್ನೂ ಮೂರು ವರ್ಷ ಸ್ಥಿರ ಸರ್ಕಾರ ನಡೆದು ದೇಶದಲ್ಲಿ ಕರ್ನಾಟಕ ನಂಬರ್ ಒನ್ ಮಾಡಲು ಹಾಗೂ ದಕ್ಷಿಣ ದ ಇತರ ರಾಜ್ಯಗಳಿಗೆ ಬಿಜೆಪಿ ವಿಸ್ತರಿಸಲು ಎಲ್ಲರೂ ಶ್ರಮಿಸಬೇಕು ಎಂದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago