Featured

ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ , ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್‌ ಕಳೆದುಕೊಂಡಿದೆ : ಎಚ್‌.ಡಿ. ಕುಮಾರಸ್ವಾಮಿ -Vishwanews24

  • ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ , ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್‌ ಕಳೆದುಕೊಂಡಿದೆ : ಎಚ್‌.ಡಿ. ಕುಮಾರಸ್ವಾಮಿ -Vishwanews24

  • ಬಿಜೆಪಿಯವನ್ನು ಸಮರ್ಥವಾಗಿ ಎದುರಿಸುವಷ್ಟು ಶಕ್ತಿಯನ್ನು ಕಾಂಗ್ರೆಸ್‌ ಪಡೆಯುವುದು ಕಷ್ಟ..

ಬೆಂಗಳೂರು : ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್‌ ಕಳೆದುಕೊಂಡಿದ್ದು, ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ. ಮುಂದೆ ಪ್ರಾದೇಶಿಕ ಪಕ್ಷಗಳೇ ಬಿಜೆಪಿಗೆ ಪ್ರಬಲ ಎದುರಾಳಿಗಳಾಗಲಿವೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕಾಂಗ್ರೆಸ್‌ ಪಕ್ಷವು ಈಗ ಸಾಗುತ್ತಿರುವ ಹಾದಿಯನ್ನು ನೋಡಿದರೆ ಬಿಜೆಪಿಯವನ್ನು ಸಮರ್ಥವಾಗಿ ಎದುರಿಸುವಷ್ಟು ಶಕ್ತಿಯನ್ನು ಕಾಂಗ್ರೆಸ್‌ ಪಡೆಯುವುದು ಕಷ್ಟ. ಮುಂದಿನ ಲೋಕಸಭಾ ಚುನಾವಣೆಯ ವೇಳೆಗೆ ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳ ನಡುವೆಯೇ ಸ್ಪರ್ಧೆ ಇದರಲಿದೆ” ಎಂದರು.

ಇನ್ನು “ಕಾಂಗ್ರೆಸ್‌ ಪಕ್ಷವು ಪಂಜಾಬ್‌ನಲ್ಲಿ ಹೋಳಾಗಿದೆ. ಕರ್ನಾಟಕದಲ್ಲಿ ಒಂದಷ್ಟು ಶಕ್ತಿ ಇದೆ. ಆದರೆ ವಿಧಾನಸಭಾ ಚುನಾವಣೆಗೆ ಇನ್ನೂ 18 ತಿಂಗಳಿದೆ. ರಾಜ್ಯ ಕಾಂಗ್ರೆಸ್‌ನಲ್ಲೂ ಆಂತರಿಕ ಸಂಘರ್ಷವಿದ್ದು, 18 ತಿಂಗಳಲ್ಲಿ ಇಲ್ಲಿಯೂ ಏನಾದರೂ ಆಗಬಹುದು” ಎಂದಿದ್ದಾರೆ.

“ನಮ್ಮ ಜೆಡಿಎಸ್‌ ಪಕ್ಷವನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಸೇರಿದಂತೆ ಪಕ್ಷ ತೊರೆದಿರುವ ನಾಯಕರು ಇದ್ದಾಗಲೂ ಜೆಡಿಎಸ್‌ ಶಾಸಕರ ಸಂಖ್ಯೆ 50 ದಾಟಿರಲಿಲ್ಲ” ಎಂದು ಹೇಳಿದ್ದಾರೆ.

ಉಡುಪಿ : ಗಾಂಧೀಜಿ ಅಶಯದ ಸ್ವಚ್ಛ ಭಾರತ ಕಲ್ಪನೆ ಸಾಕಾರಗೊಂಡಿದೆ : ರಘುಪತಿ ಭಟ್ -Vishwanews24

 

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 day ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

1 day ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

1 day ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago