ಬೆಂಗಳೂರು : ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ದೇಶದಲ್ಲಿ ಕಾಂಗ್ರೆಸ್ಗೆ ಭವಿಷ್ಯವಿಲ್ಲ. ಮುಂದೆ ಪ್ರಾದೇಶಿಕ ಪಕ್ಷಗಳೇ ಬಿಜೆಪಿಗೆ ಪ್ರಬಲ ಎದುರಾಳಿಗಳಾಗಲಿವೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷವು ಈಗ ಸಾಗುತ್ತಿರುವ ಹಾದಿಯನ್ನು ನೋಡಿದರೆ ಬಿಜೆಪಿಯವನ್ನು ಸಮರ್ಥವಾಗಿ ಎದುರಿಸುವಷ್ಟು ಶಕ್ತಿಯನ್ನು ಕಾಂಗ್ರೆಸ್ ಪಡೆಯುವುದು ಕಷ್ಟ. ಮುಂದಿನ ಲೋಕಸಭಾ ಚುನಾವಣೆಯ ವೇಳೆಗೆ ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳ ನಡುವೆಯೇ ಸ್ಪರ್ಧೆ ಇದರಲಿದೆ” ಎಂದರು.
ಇನ್ನು “ಕಾಂಗ್ರೆಸ್ ಪಕ್ಷವು ಪಂಜಾಬ್ನಲ್ಲಿ ಹೋಳಾಗಿದೆ. ಕರ್ನಾಟಕದಲ್ಲಿ ಒಂದಷ್ಟು ಶಕ್ತಿ ಇದೆ. ಆದರೆ ವಿಧಾನಸಭಾ ಚುನಾವಣೆಗೆ ಇನ್ನೂ 18 ತಿಂಗಳಿದೆ. ರಾಜ್ಯ ಕಾಂಗ್ರೆಸ್ನಲ್ಲೂ ಆಂತರಿಕ ಸಂಘರ್ಷವಿದ್ದು, 18 ತಿಂಗಳಲ್ಲಿ ಇಲ್ಲಿಯೂ ಏನಾದರೂ ಆಗಬಹುದು” ಎಂದಿದ್ದಾರೆ.
“ನಮ್ಮ ಜೆಡಿಎಸ್ ಪಕ್ಷವನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಸೇರಿದಂತೆ ಪಕ್ಷ ತೊರೆದಿರುವ ನಾಯಕರು ಇದ್ದಾಗಲೂ ಜೆಡಿಎಸ್ ಶಾಸಕರ ಸಂಖ್ಯೆ 50 ದಾಟಿರಲಿಲ್ಲ” ಎಂದು ಹೇಳಿದ್ದಾರೆ.
ಉಡುಪಿ : ಗಾಂಧೀಜಿ ಅಶಯದ ಸ್ವಚ್ಛ ಭಾರತ ಕಲ್ಪನೆ ಸಾಕಾರಗೊಂಡಿದೆ : ರಘುಪತಿ ಭಟ್ -Vishwanews24
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…