ಬೆಂಗಳೂರು, : ಒಂದು ರಾಷ್ಟ್ರ ಒಂದು ಚುನಾವಣೆ ಕಲ್ಪನೆಯಂತೆ ಬಿಜೆಪಿಯೂ ದೇಶದ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ‘ಒಂದು ರಾಷ್ಟ್ರ ಒಂದು ಗೋ ಹತ್ಯೆ ನಿಷೇಧ ಕಾನೂನು’ ಜಾರಿಗೆ ತರಲಿ ಎಂದು ಯು.ಟಿ. ಖಾದರ್ ಸರಕಾರಕ್ಕೆ ವಿಡಂಬನೆ ಮಾಡಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವರು, ಯಾವ ರೀತಿಯಲ್ಲಿ ಕರ್ನಾಟಕದಲ್ಲಿ ಜಾರಿಗೆ ತಂದರೋ ಅದರಂತೆ ಬೇರೆ ಬೇರೆ ರಾಜ್ಯದಲ್ಲೂ ಬಿಜೆಪಿಯೂ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ ಎಂದು ಸವಾಲು ಹಾಕಿದ್ದಾರೆ.
ಇದನ್ನೂ ಓದಿ : ಮಂಗಳೂರು : ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆ -Vishwanews24
ನೀವು ಕರ್ನಾಟಕ ರಾಜ್ಯಕ್ಕೆ ಒಂದು ರೀತಿಯ ಕಾನೂನು, ಕೇರಳದಲ್ಲಿ ಚುನಾವಣೆ ಬಂದರೆ ಮತ್ತೊಂದು ರೀತಿಯ ಕಾನೂನು, ಇನ್ನು ಗೋವಾಕ್ಕೆ ಒಂದು ರೀತಿಯ ಕಾನೂನು ಜಾರಿಗೆ ತರುತ್ತೀರಿ. ನಿಮಗೆ ನಿಜವಾಗಲೂ ಗೋವಿನ ಬಗ್ಗೆ ಭಾವನಾತ್ಮಕ ನಂಬಿಕೆ ಇದ್ದರೆ, ಇಡೀ ದೇಶದಲ್ಲಿ ಗೋ ಮಾಂಸ ನಿಷೇಧ ಮಾಡಿ ಎಂದರು. ಅಲ್ಲದೇ, ಗೋ ಮಾಂಸ ರಫ್ತು ಕೂಡಾ ನಿಲ್ಲಿಸಿ ಎಂದರು.
“ಇನ್ನು ನಮ್ಮ ಸರಕಾರ ಜಾರಿಗೆ ತಂದ ಪಶು ಭಾಗ್ಯ ಯೋಜನೆಯನ್ನು ನಿಲ್ಲಿಸಿದ್ದೀರಿ. ಇದರಿಂದ ಗೋ ಸಂತತಿ ಕಡಿಮೆಯಾಗುತ್ತಿದೆ”. ಮತ್ತೇ ಪಶು ಭಾಗ್ಯ ಯೋಜನೆ ಜಾರಿಗೆ ತರುವಂತೆ ಯುಟಿ ಖಾದರ್ ಒತ್ತಾಯಿಸಿದರು.
ಇದನ್ನೂ ಓದಿ : ಮಂಗಳೂರು : ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]