ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂವಿಧಾನ, ಸ್ವಾತಂತ್ರ್ಯದ ಹೆಸರಿನಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆಯಂತಹ ಹಿರಿಯರು ಕೂಡ ಸಂವಿಧಾನಕ್ಕೆ ಧಕ್ಕೆಯಾಗಿದೆ ಎಂದು ಮಾತನಾಡುತ್ತಾರೆ. ಸಂವಿಧಾನದ ತಿದ್ದು ಮಾಡಿದ್ದು, ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿ ಸಂವಿಧಾನಕ್ಕೆ ಧಕ್ಕೆ ತಂದಿರುವುದು ಕಾಂಗ್ರೆಸ್ ಪಕ್ಷ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ, ಅಡ್ವಾಣಿಯಂತಹ ಹಿರಿಯ ನಾಯಕರನ್ನು ಜೈಲಿಗೆ ಹಾಕಿದ ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನಕ್ಕೆ ಧಕ್ಕೆಯಾಗಿದೆ ಎಂದು ಹೇಳುವ ಹಕ್ಕಿಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಮಶಾನ ನಿರ್ಮಾಣಕ್ಕೆ ಕಾಂಗ್ರೆಸ್ ಹೊಸದಿಲ್ಲಿಯಲ್ಲಿ 10 ಅಡಿ ಜಾಗ ನೀಡಲಿಲ್ಲ. ರಾಜಕೀಯ ಬೇಳೆ ಬೇಯಿಸಲು ಅಂಬೇಡ್ಕರ್ ಅವರ ಹೆಸರು ಬಳಕೆ ಮಾಡುತ್ತಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಇತ್ತೀಚೆಗೆ ಸಂವಿಧಾನದ ಬಗ್ಗೆ ಸಮಾವೇಶ ಏರ್ಪಡಿಸಿ ಸರಕಾರಿ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಅವರನ್ನು ನಿಂದಿಸಲು ಬಳಸಿದ್ದಾರೆ. ಕೇಂದ್ರದ ಬಗ್ಗೆ ದೂಷಣೆ ಮಾಡಲು ಜನರ ತೆರಿಗೆ ಹಣ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಸತೀಶ್ ಕುಂಪಲ, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಕಿಶೋರ್, ಮಂಜುಳಾ ರಾವ್, ನಂದನ್ ಮಲ್ಯ, ವಸಂತ ಪೂಜಾರಿ ಇದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…