Featured

ದೇಶದಲ್ಲಿ ಬಿಜೆಪಿ ಬಿಟ್ಟು ಇನ್ನೊಂದು ಪಕ್ಷ ಆಡಳಿತದಲ್ಲಿರಬಾರದು ಬಿಜೆಪಿಗರ ಉದ್ದೇಶ : ಕುಮಾರಸ್ವಾಮಿ ಆಕ್ರೋಶ – Vishwanews24

ಮಹಾರಾಷ್ಟ್ರದಲ್ಲಿ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಲು ಬಿಜೆಪಿಯೇ ಕಾರಣ..

ಕರ್ನಾಟಕದಲ್ಲಿಯೂ ಇದೇ ರೀತಿಯ ತಂತ್ರ ಹೆಣೆದು ಅಧಿಕಾರಕ್ಕೆ ಬಂದಿದ್ದರು..

ರಾಮನಗರ: ದೇಶದಲ್ಲಿ ಬಿಜೆಪಿ ಹೊರತುಪಡಿಸಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿರಬಾರದು ಎಂಬುದೇ ಬಿಜೆಪಿಗರ ಉದ್ದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಲು ಬಿಜೆಪಿಯೇ ಕಾರಣ. ಅಲ್ಲಿನ ಸರ್ಕಾರ ಉರುಳಿಸಿ ಸರ್ಕಾರ ರಚನೆಗೆ ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ. ಆದರೆ ಬಾಹ್ಯವಾಗಿ ತಮಗೇನೂ ಗೊತ್ತಿಲ್ಲ ಎಂದು ಆ ಪಕ್ಷದವರು ಹೇಳಿಕೊಳ್ಳುತ್ತಿದ್ದಾರೆ. ಆದರೆ ಈ ವಿಚಾರ ಇಡೀ ದೇಶಕ್ಕೇ ಗೊತ್ತಿದೆ. ಮಹಾ ಶಾಸಕರನ್ನು ಹೈಜಾಕ್ ಮಾಡಿ ಬಿಜೆಪಿ ಸರ್ಕಾರವಿರುವ ರಾಜ್ಯದ ರೆಸಾರ್ಟ್‌ನಲ್ಲಿ ಕೂಡಿಡಲಾಗಿದೆ ಎಂದವರು ಆಪಾದಿಸಿದರು.

ದೇಶದಲ್ಲಿ ಬಿಜೆಪಿ ಬಿಟ್ಟು ಇನ್ನೊಂದು ಪಕ್ಷ ಆಡಳಿತದಲ್ಲಿರಬಾರದು ಎಂಬುದು ಆ ಪಕ್ಷದ ಉದ್ದೇಶವಾಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ತಂತ್ರ ಹೆಣೆದು ಅಧಿಕಾರಕ್ಕೆ ಬಂದಿದ್ದರು ಎಂದವರು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

17 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago