ನವದೆಹಲಿ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧಿಜೀಯವರಿಗೆ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕು ಎನ್ನುವುದು ಆಶಯವಾಗಿತ್ತು ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ನಿನ್ನೆ (ಫೆ.16) ದೆಹಲಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಿತೀಶ್ ಕುಮಾರ್ ಮದ್ಯಪಾನದಿಂದಾಗುವ ತೊಂದರೆಗಳ ಕುರಿತಾಗಿ ಮಾತನಾಡಿದ್ದಾರೆ. ಅದರಿಂದಾಗುವ ತೊಂದರೆಗಳನ್ನು ಪರಿಗಣಿಸಿಯೇ ತಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಮಾಡಿರುವುದಾಗಿ ತಿಳಿಸಿರುವ ಅವರು ಇಡೀ ದೇಶದಲ್ಲಿಯೇ ಮದ್ಯ ನಿಷೇಧವಾಗಬೇಕು ಎಂದು ಹೇಳಿದ್ದಾರೆ. ಪೂರ್ತಿ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕೆನ್ನುವುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯ ಕೂಡ ಆಗಿತ್ತು ಎಂದು ತಿಳಿಸಿದ್ದಾರೆ.
ಈ ಹಿಂದೆಯೇ ನಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವ ಪ್ರಯತ್ನವನ್ನು ಮಾಜಿ ಮುಖ್ಯಮಂತ್ರಿಗಳು ಮಾಡಿದ್ದರು. ಆದರೆ ಅದು ಪೂರ್ಣ ಪ್ರಮಾಣದಲ್ಲಿ ಯಶಸ್ಸು ಕಂಡಿರಲಿಲ್ಲ. ನಾನು ಮದ್ಯ ನಿಷೇಧ ಮಾಡುವುದಕ್ಕೆ 2011ರಿಂದಲೇ ಪ್ರಯತ್ನಿಸಿದ್ದೇನೆ. ಅದು 2016ಕ್ಕೆ ಸಫಲವಾಯಿತು ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…