ನವದೆಹಲಿ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧಿಜೀಯವರಿಗೆ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕು ಎನ್ನುವುದು ಆಶಯವಾಗಿತ್ತು ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ನಿನ್ನೆ (ಫೆ.16) ದೆಹಲಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಿತೀಶ್ ಕುಮಾರ್ ಮದ್ಯಪಾನದಿಂದಾಗುವ ತೊಂದರೆಗಳ ಕುರಿತಾಗಿ ಮಾತನಾಡಿದ್ದಾರೆ. ಅದರಿಂದಾಗುವ ತೊಂದರೆಗಳನ್ನು ಪರಿಗಣಿಸಿಯೇ ತಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಮಾಡಿರುವುದಾಗಿ ತಿಳಿಸಿರುವ ಅವರು ಇಡೀ ದೇಶದಲ್ಲಿಯೇ ಮದ್ಯ ನಿಷೇಧವಾಗಬೇಕು ಎಂದು ಹೇಳಿದ್ದಾರೆ. ಪೂರ್ತಿ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕೆನ್ನುವುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯ ಕೂಡ ಆಗಿತ್ತು ಎಂದು ತಿಳಿಸಿದ್ದಾರೆ.
ಈ ಹಿಂದೆಯೇ ನಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವ ಪ್ರಯತ್ನವನ್ನು ಮಾಜಿ ಮುಖ್ಯಮಂತ್ರಿಗಳು ಮಾಡಿದ್ದರು. ಆದರೆ ಅದು ಪೂರ್ಣ ಪ್ರಮಾಣದಲ್ಲಿ ಯಶಸ್ಸು ಕಂಡಿರಲಿಲ್ಲ. ನಾನು ಮದ್ಯ ನಿಷೇಧ ಮಾಡುವುದಕ್ಕೆ 2011ರಿಂದಲೇ ಪ್ರಯತ್ನಿಸಿದ್ದೇನೆ. ಅದು 2016ಕ್ಕೆ ಸಫಲವಾಯಿತು ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…