ಹೈದರಾಬಾದ್: ನಾಯಿಗಳಿಗಾಗಿಯೇ ಮೀಸಲಾದ ದೇಶದ ಮೊದಲ ಉದ್ಯಾನವನ ಇಲ್ಲಿನ ಕೊಂಡಾಪುರ್ ಪ್ರದೇಶದಲ್ಲಿ ಉದ್ಘಾಟನೆಗೆ ಅಣಿಯಾಗಿದೆ. 1.3 ಎಕರೆ ಪ್ರದೇಶದಲ್ಲಿರುವ ಈ ಕೇಂದ್ರ ನಾಯಿಗಳಿಗೆ ಅನುಕೂಲವಾದ ನಡಿಗೆಪಥ, ವಿಹಾರಕ್ಕೆ ಅನುಕೂಲವಾದ ಜಾಗ, ಕ್ಲಿನಿಕ್ ಸಹ ಒಳಗೊಂಡಿದೆ.
‘ನಾಯಿಗಳಿಗೆ ತರಬೇತಿ ಮತ್ತು ವ್ಯಾಯಾಮಕ್ಕೆ ಅನುಕೂಲವಾದ ಉಪಕರಣ, ಈಜುಕೊಳ, ಎರಡು ಹುಲ್ಲುಗಾವಲು ಪ್ರದೇಶ, ವರ್ತುಲ ಕ್ರೀಡಾಂಗಣ, ಆಟೋಟ ಕೇಂದ್ರಗಳು ಇದರಲ್ಲಿವೆ. ದೊಡ್ಡ ಮತ್ತು ಚಿಕ್ಕದಾದ ನಾಯಿಗಳಿಗೆ ಪ್ರತ್ಯೇಕವಾದ ವ್ಯವಸ್ಥೆ ಮಾಡಲಾಗಿದೆ’ ಎಂದು ಜಿಎಚ್ಎಂಸಿಯ ಅಧಿಕಾರಿಯೊಬ್ಬರು ತಿಳಿಸಿದರು.
ಕಳೆದ ಒಂದು ವರ್ಷದಿಂದ ಈ ಉದ್ಯಾನ ನಿರ್ಮಾಣವಾಗುತ್ತಿದ್ದು, ವಾಸ್ತುಶಿಲ್ಪ ಹಾಗೂ ಶ್ವಾನಪ್ರೇಮಿಗಳ ಸಲಹೆ ಮೇರೆಗೆ ಆಧುನಿಕ ಉಪಕರಣ ಹಾಗೂ ಕೇಂದ್ರದ ವಿನ್ಯಾಸ ಮಾಡಲಾಗಿದೆ.
ಹತ್ತು ದಿನದಲ್ಲಿ ಉದ್ಘಾಟನೆ: ಮುಂದಿನ ಹತ್ತು ದಿನಗಳಲ್ಲಿ ತೆಲಂಗಾಣ ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮರಾವ್ ಉದ್ಘಾಟಿಸಲಿದ್ದಾರೆ. ಇದರ ಯಶಸ್ಸನ್ನು ಆಧರಿಸಿ, ನಗರದ ಪೂರ್ವಭಾಗದಲ್ಲಿ ಮತ್ತೊಂದು ಉದ್ಯಾನವನ ನಿರ್ಮಿಸುವ ಬಗ್ಗೆ ಯೋಜನೆ ರೂಪಿಸಲು ಜಿಎಚ್ಎಂಸಿ ನಿರ್ಧರಿಸಿದೆ.
ನಗರದಲ್ಲಿ 2.5 ಲಕ್ಷ ನಾಯಿ:ಜಿಎಚ್ಎಂಸಿ ನಡೆಸಿದ ಸಮೀಕ್ಷೆ ಪ್ರಕಾರ, ಪಶ್ಚಿಮ ವಲಯ ಮತ್ತು ಕೇಂದ್ರ ವಲಯದಲ್ಲಿ 2.5 ಲಕ್ಷ ಮಂದಿ ನಾಯಿಗಳನ್ನು ಸಾಕುತ್ತಿದ್ದಾರೆ. ನಗರದ ಕೇಂದ್ರಭಾಗದಲ್ಲಿ ಉದ್ಯಾನ ಇರುವ ಕಾರಣ ಇಲ್ಲಿಗೆ ನಾಯಿಗಳನ್ನು ಕರೆತರುವುದು ಸುಲಭ. ಉಳಿದಂತೆ ಮಾಮೂಲಿ ಉದ್ಯಾನದಲ್ಲಿ ನಾಯಿಗಳ ಓಡಾಟವನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…