Featured

ದೇಶದಲ್ಲಿ ಮೊದಲ ಬಾರಿಗೆ ನಾಯಿಗಳ ಉದ್ಯಾನವನ ನಿರ್ಮಾಣವಾಗಿದೆ ಇದು ಎಲ್ಲಿದೆ ಗೊತ್ತಾ…? ಓದಿ ಈ ವರದಿ

ಹೈದರಾಬಾದ್‌: ನಾಯಿಗಳಿಗಾಗಿಯೇ ಮೀಸಲಾದ ದೇಶದ ಮೊದಲ ಉದ್ಯಾನವನ ಇಲ್ಲಿನ ಕೊಂಡಾಪುರ್‌ ಪ್ರದೇಶದಲ್ಲಿ ಉದ್ಘಾಟನೆಗೆ ಅಣಿಯಾಗಿದೆ. 1.3 ಎಕರೆ ಪ್ರದೇಶದಲ್ಲಿರುವ ಈ ಕೇಂದ್ರ ನಾಯಿಗಳಿಗೆ ಅನುಕೂಲವಾದ ನಡಿಗೆಪಥ, ವಿಹಾರಕ್ಕೆ ಅನುಕೂಲವಾದ ಜಾಗ, ಕ್ಲಿನಿಕ್‌ ಸಹ ಒಳಗೊಂಡಿದೆ.

‘ನಾಯಿಗಳಿಗೆ ತರಬೇತಿ ಮತ್ತು ವ್ಯಾಯಾಮಕ್ಕೆ ಅನುಕೂಲವಾದ ಉಪಕರಣ, ಈಜುಕೊಳ, ಎರಡು ಹುಲ್ಲುಗಾವಲು ಪ್ರದೇಶ, ವರ್ತುಲ ಕ್ರೀಡಾಂಗಣ, ಆಟೋಟ ಕೇಂದ್ರಗಳು ಇದರಲ್ಲಿವೆ. ದೊಡ್ಡ ಮತ್ತು ಚಿಕ್ಕದಾದ ನಾಯಿಗಳಿಗೆ ಪ್ರತ್ಯೇಕವಾದ ವ್ಯವಸ್ಥೆ ಮಾಡಲಾಗಿದೆ’ ಎಂದು ಜಿಎಚ್‌ಎಂಸಿಯ ಅಧಿಕಾರಿಯೊಬ್ಬರು ತಿಳಿಸಿದರು.

ಕಳೆದ ಒಂದು ವರ್ಷದಿಂದ ಈ ಉದ್ಯಾನ ನಿರ್ಮಾಣವಾಗುತ್ತಿದ್ದು, ವಾಸ್ತುಶಿಲ್ಪ ಹಾಗೂ ಶ್ವಾನಪ್ರೇಮಿಗಳ ಸಲಹೆ ಮೇರೆಗೆ ಆಧುನಿಕ ಉಪಕರಣ ಹಾಗೂ ಕೇಂದ್ರದ ವಿನ್ಯಾಸ ಮಾಡಲಾಗಿದೆ.

ಹತ್ತು ದಿನದಲ್ಲಿ ಉದ್ಘಾಟನೆ: ಮುಂದಿನ ಹತ್ತು ದಿನಗಳಲ್ಲಿ ತೆಲಂಗಾಣ ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮರಾವ್‌ ಉದ್ಘಾಟಿಸಲಿದ್ದಾರೆ. ಇದರ ಯಶಸ್ಸನ್ನು ಆಧರಿಸಿ, ನಗರದ ಪೂರ್ವಭಾಗದಲ್ಲಿ ಮತ್ತೊಂದು ಉದ್ಯಾನವನ ನಿರ್ಮಿಸುವ ಬಗ್ಗೆ ಯೋಜನೆ ರೂಪಿಸಲು ಜಿಎಚ್‌ಎಂಸಿ ನಿರ್ಧರಿಸಿದೆ.

ನಗರದಲ್ಲಿ 2.5 ಲಕ್ಷ ನಾಯಿ:ಜಿಎಚ್‌ಎಂಸಿ ನಡೆಸಿದ ಸಮೀಕ್ಷೆ ಪ್ರಕಾರ, ಪಶ್ಚಿಮ ವಲಯ ಮತ್ತು ಕೇಂದ್ರ ವಲಯದಲ್ಲಿ 2.5 ಲಕ್ಷ ಮಂದಿ ನಾಯಿಗಳನ್ನು ಸಾಕುತ್ತಿದ್ದಾರೆ. ನಗರದ ಕೇಂದ್ರಭಾಗದಲ್ಲಿ ಉದ್ಯಾನ ಇರುವ ಕಾರಣ ಇಲ್ಲಿಗೆ ನಾಯಿಗಳನ್ನು ಕರೆತರುವುದು ಸುಲಭ. ಉಳಿದಂತೆ ಮಾಮೂಲಿ ಉದ್ಯಾನದಲ್ಲಿ ನಾಯಿಗಳ ಓಡಾಟವನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago