ಉಡುಪಿ : ನಮೋ ಎಂದರೆ ನರೇಂದ್ರ ಮೋದಿ ಅಲ್ಲ ಬದಲಾಗಿ ನಮಗೆ ಮೋಸ ಎಂಬುದು ದೇಶದ ಜನತೆಗೆ ಈಗ ಅರ್ಥವಾಗುತ್ತಿದೆ. ದೇಶದಲ್ಲಿ ನರೇಂದ್ರ ಮೋದಿ ಒಬ್ಬರನ್ನು ಬಿಟ್ಟು ಬೇರೆ ಎಲ್ಲರೂ ದುಃಖದಲ್ಲಿಯೇ ದಿನದೂಡುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಗುರುವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ಜನವಿರೋಧಿ ಆರ್ಥಿಕ ನೀತಿಯ ವಿರುದ್ದ ಆಯೋಜಿಸಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಜನರು ಬಹಳ ನಿರೀಕ್ಷೆ ಇಟ್ಟು ಮೋದಿಯವರನ್ನು ಆಯ್ಕೆ ಮಾಡಿದ್ದು ಪುಲ್ವಾಮ ಮತ್ತು ಬಾಲಾಕೋಟ್ ಘಟನೆಗಳನ್ನು ಮುಂದಿಟ್ಟುಕೊಂಡು ಜನರನ್ನು ಮನಸ್ಸನ್ನು ಗೆದ್ದು ಅಧಿಕಾರಕ್ಕೆ ಬಂದ ಮೋದಿಯವರ ಸರಕಾರ ಇಂದು ಬಡ ಜನರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಮೋದಿಯವರ ತಪ್ಪು ಆರ್ಥಿಕ ನೀತಿಯ ಪರಿಣಾಮ, ಎಲ್ಲಾ ರೀತಿಯ ಉದ್ಯಮಗಳು ನಷ್ಟದ ಅಂಚಿನಲ್ಲಿವೆ. ದೇಶದಲ್ಲಿ ಎಲ್ಲಾ ವರ್ಗದ ಜನರು ಕೂಡ ತಮ್ಮ ಉದ್ಯಮಗಳನ್ನು ನಷ್ಟದಲ್ಲಿರಿಸಿಕೊಂಡು ನೋವು ತಿನ್ನುತ್ತಿದ್ದು ಇಡೀ ದೇಶದ ಜನತೆ ದುಃಖದಲ್ಲಿದ್ದರೆ ಮೋದಿ ಮಾತ್ರ ಸಂತೋಷ ಪಡುತ್ತಿದ್ದಾರೆ. ಹಿಂದಿನ ಮನಮೋಹನ್ ಸಿಂಗ್ ಅಧಿಕಾರವಧಿಯಲ್ಲಿ ದೇಶದ ಆರ್ಥಿಕ ಸ್ಥಿತ ಉತ್ತಮವಾಗಿದ್ದರೆ ಇಂದು ಅದು ದೇಶವನ್ನು ಅವನತಿಯತ್ತ ಕೊಂಡೊಯ್ಯಲು ಕಾರಣವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಯು ಆರ್ ಸಭಾಪತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಾಯಕರಾದ ಪಿ ವಿ ಮೋಹನ್, ಹರೀಶ್ ಕಿಣಿ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…