Featured

ದೇಶದಲ್ಲಿ ಮೋದಿ ಸುನಾಮಿ, 2019ರ ಬಳಿಕ ಚುನಾವಣೆಯೇ ಅಗತ್ಯವಿಲ್ಲ: ಸಾಕ್ಷಿ ಮಹಾರಾಜ್ – Vishwanews24

ಉನ್ನಾವೋ: ಮೋದಿ ಸುನಾಮಿ ಎಷ್ಟು ತೀವ್ರವಾಗಿದೆ ಎಂದರೆ, 2019ರ ಬಳಿಕ ಚುನಾವಣೆಯ ಅಗತ್ಯವೇ ಇರುವುದಿಲ್ಲ ಎಂದು ಉನ್ನಾವೋದಲ್ಲಿ ನಡೆಸಿದ ಸಾರ್ವಜನಿಕ ಸಮಾವೇಶದಲ್ಲಿ ಸಾಕ್ಷಿ ಮಹಾರಾಜ್‌ ಭವಿಷ್ಯ ನುಡಿದರು.

ಮೋದಿ ನಾಮ್‌ ಕಿ ಸುನಾಮಿ ಹೈ. ದೇಶ್‌ ಮೇ ಜಾಗೃತಿ ಆಯಿ ಹೈ. ಮುಝೆ ಲಗ್ತಾ ಹೈ ಕಿ ಇಸ್‌ ಚುನಾವ್‌ ಹೈ ಇಸ್‌ ದೇಶ ಕೇ ಲಿಯೆ ಪ್ರತ್ಯಾಶಿ ಜಿತ್ವಾನೆ ಕಾ ಕಮ್‌ ಕರೇಂಗೆʼ (ದೇಶದಲ್ಲಿ ಮೋದಿ ಸುನಾಮಿಯೇ ಎದ್ದಿದೆ. ದೇಶಾದ್ಯಂತ ಹೊಸ ಜಾಗೃತಿ ಮೂಡಿದೆ. 2019ರ ಚುನಾವಣೆ ಬಳಿಕ 2024ರಲ್ಲಿ ಮತ್ತೆ ಚುನಾವಣೆಯ ಅಗತ್ಯವೇ ಬಾರದು ಎಂದು ನನ್ನ ಅನಿಸಿಕೆ. ಇದೊಂದೇ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ನಾವು ಶ್ರಮಿಸಿದರೆ ಸಾಕುʼ ಎಂದು ಸಾಕ್ಷಿ ಮಹಾರಾಜ್‌ ಹೇಳಿದ್ದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

17ನೇ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಎರಡನೇ ಅವಧಿಗೆ ಆಯ್ಕೆ ಬಯಸಿದ್ದು, ಏಪ್ರಿಲ್‌ 11ರಿಂದ ಏಳು ಹಂತಗಳಲ್ಲಿ ಚುನಾವಣೆಗಳು ನಡೆಯಲಿವೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಚುನಾವಣಾ ಆಯೋಗ ಮಾರ್ಚ್‌ 10ರಂದು ಚುನಾವಣೆಗಳ ದಿನಾಂಕಗಳನ್ನು ಪ್ರಕಟಿಸಿತ್ತು. ಲೋಕಸಭೆ ಚುನಾವಣೆಗಳ ಜತೆಗೆ ಅರುಣಾಚಲಪ್ರದೇಶ, ಆಂದ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ವಿಧಾನಸಭೆಗಳಿಗೂ ಏಕಕಾಲಕ್ಕೆ ಚುನಾವಣೆ ನಡೆಯಲಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ತಮಗೆ ಟಿಕೆಟ್‌ ನಿರಾಕರಿಸಿದರೂ ಸ್ವತಂತ್ರವಾಗಿ ಸ್ಪರ್ಧಿಸುವುದು ಖಚಿತ ಎಂದು ಈ ಮೊದಲು ಸಾಕ್ಷಿ ಮಹಾರಾಜ್‌ ಹೇಳಿದ್ದರು. ತಮಗೆ ಪಕ್ಷ ಟಿಕೆಟ್‌ ನಿರಾಕರಿಸುವುದು ಉತ್ತಮ ಆಯ್ಕೆಯಾಗದು ಎಂದು ಸಾಕ್ಷಿ ಮಹಾರಾಜ್‌ ಎಚ್ಚರಿಸಿದ್ದರು.

Vishwa News 24

Recent Posts

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

46 minutes ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 hours ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 hours ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 hours ago

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮ -vishwanews24

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಪಿಲಿಏಸ-2026" ಕಾರ್ಯಕ್ರಮ  ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ :…

2 hours ago

ಉಡುಪಿ : ವ್ಯಕ್ತಿ ನಾಪತ್ತೆ -vishwanews24

ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…

19 hours ago