ಮೂಡಿಗೆರೆ: ದೇಶದಲ್ಲಿ ಮೋದಿ ಹವಾ ಈಗ ನಡೆಯುತ್ತಿಲ್ಲ. ಜನ ಎಚ್ಚೆತ್ತುಕೊಂಡಿದ್ದಾರೆ. ಬದಲಾವಣೆ ಬಯಸುತ್ತಿದ್ದಾರೆ. ಸಂಕಷ್ಟಗಳನ್ನು ಎದುರಿಸುತ್ತಿದ್ದ ಜನರಿಗೆ ಈಗ ಅರಿವಾಗಿದೆ. ಸುಳ್ಳು ಮಾರಾಟವಾಗವುದಿಲ್ಲ ಎಂಬುದು ಬಿಜೆಪಿಗೂ ಗೊತ್ತಾಗಿದೆ ಎಂದು ಮಾಜಿ ಸಚಿವೆ ಮೋಟಮ್ಮ ಅವರು ಹೇಳಿದ್ದಾರೆ.
ಮೂಡಿಗೆರೆಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ನೀಡಿರುವ ಗ್ಯಾರೆಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿಯೇ ಈಗ ಗ್ಯಾರೆಂಟಿ ಯೋಜನೆಗಳನ್ನು ನಕಲು ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳಿನ ಸರಕುಗಳು ಈಗ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿಲ್ಲ. ಜನರು ಪ್ರಶ್ನೆ ಮಾಡಲು ಆರಂಭಿಸಿದ್ದಾರೆ. ಯೋಚಿಸಲು ಆರಂಭಿಸಿದ್ದಾರೆ. ರೈತರ ಸಾಲಮನ್ನ ಮಾಡಿದರೆ ಸರಕಾರ ದೀವಾಳಿಯಾಗುತ್ತದೆ ಎನ್ನುವ ಬಿಜೆಪಿಗರು ಕಾರ್ಪೋರೆಟ್ ಕುಳಗಳ 11 ಲಕ್ಷ ಕೋಟಿ ಸಾಲ ಮನ್ನ ಮಾಡಿರುವುದರೆ ದೇಶ ದೀವಾಳಿ ಆಗುವುದಿಲ್ಲವೇ?.” ಎಂದು ಪ್ರಶ್ನಿಸಿದರು.
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮಾತನಾಡಿ, “ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಗ್ಯಾರೆಂಟಿ ಯೋಜನೆ ಪಡೆದರೆ ಮಹಿಳೆಯರು ಹಾದಿ ತಪ್ಪುತ್ತಾರೆ ಎಂದಿದ್ದಾರೆ, ಇದು ಅತ್ಯಂತ ನಾಚಿಕೆಗೇಡಿನ ಸಂಗತಿ, ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ, ನಮ್ಮ ರಾಜ್ಯದ ಮಹಿಳೆಯರು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಹುಂಡಿಗೂ ಹಣ ಹಾಕಿದ್ದಾರೆ, ಇದರಿಂದ ಅವರ ಮನಸ್ಸಿಗೂ ನೆಮ್ಮದಿ ಸಿಕ್ಕಿದೆ. ಕುಮಾರ ಸ್ವಾಮಿಯ ಈ ಹೇಳಿಕೆಗೆ ಇದೇ ತಿಂಗಳ 26ರಂದು ತಕ್ಕ ಉತ್ತರ ನೀಡಬೇಕಾಗಿದೆ,” ಎಂದು ಕರೆ ನೀಡಿದರು.
“ಮೂಡಿಗೆರೆಯ ಕ್ಷೇತ್ರದ ಜನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಉತ್ತಮ ರೀತಿಯಲ್ಲಿ ಬೆಂಬಲ ನೀಡಿದ್ದೀರಿ. ಈ ಹಿಂದೆ ಜಯಪ್ರಕಾಶ ಹೆಗ್ಡೆ ಅವರಿಗೆ ಕಾರ್ಯನಿರ್ವಹಿಸಲು ಸಿಕ್ಕಿದ್ದು ಕೇವಲ 20 ತಿಂಗಳ ಕಾಲಾವಕಾಶ, ಆದರೂ ಅವರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕಾಗಿದೆ. ರಾಜ್ಯದ ಯೋಜನೆಗಳನ್ನು ತರಲಿಕ್ಕೆ ನನ್ನಿಂದಾದ ಪ್ರಯತ್ನ ಮಾಡುವೆ. ಅದೇ ರೀತಿ ಕೇಂದ್ರದಿಂದ ಯೋಜನೆಗಳನ್ನು ತರಲು ನಮಗೆ ಒಬ್ಬ ಸಮರ್ಥ ನಾಯಕರ ಅಗತ್ಯವಿದೆ. ಆ ಕಾರ್ಯವನ್ನು ಜಯಪ್ರಕಾಶ ಹೆಗ್ಡೆ ಅವರು ಸಮರ್ಥವಾಗಿ ನಿಭಾಯಿಸಬಲ್ಲರು. ಆದ್ದರಿಂದ ಹೆಗ್ಡೆ ಅವರನ್ನು ಆಯ್ಕೆ ಮಾಡಿ ನಮ್ಮ ಕ್ಷೇತ್ರವನ್ನು ಉತ್ತಮಪಡಿಸಿಕೊಳ್ಳಬೇಕು,” ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…