Featured

ದೇಶದಲ್ಲಿ ಮೋದಿ ಹವಾ ಈಗ ನಡೆಯುತ್ತಿಲ್ಲ, ಜನ ಎಚ್ಚೆತ್ತುಕೊಂಡಿದ್ದಾರೆ  : ಸಚಿವೆ ಮೋಟಮ್ಮ – Vishwanews24

ದೇಶದಲ್ಲಿ ಮೋದಿ ಹವಾ ಈಗ ನಡೆಯುತ್ತಿಲ್ಲ, ಜನ ಎಚ್ಚೆತ್ತುಕೊಂಡಿದ್ದಾರೆ  : ಸಚಿವೆ ಮೋಟಮ್ಮ

ಮೂಡಿಗೆರೆ: ದೇಶದಲ್ಲಿ ಮೋದಿ ಹವಾ ಈಗ ನಡೆಯುತ್ತಿಲ್ಲ. ಜನ ಎಚ್ಚೆತ್ತುಕೊಂಡಿದ್ದಾರೆ. ಬದಲಾವಣೆ ಬಯಸುತ್ತಿದ್ದಾರೆ. ಸಂಕಷ್ಟಗಳನ್ನು ಎದುರಿಸುತ್ತಿದ್ದ ಜನರಿಗೆ ಈಗ ಅರಿವಾಗಿದೆ. ಸುಳ್ಳು ಮಾರಾಟವಾಗವುದಿಲ್ಲ ಎಂಬುದು ಬಿಜೆಪಿಗೂ ಗೊತ್ತಾಗಿದೆ ಎಂದು ಮಾಜಿ ಸಚಿವೆ ಮೋಟಮ್ಮ ಅವರು ಹೇಳಿದ್ದಾರೆ.

ಮೂಡಿಗೆರೆಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ನೀಡಿರುವ ಗ್ಯಾರೆಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿಯೇ ಈಗ ಗ್ಯಾರೆಂಟಿ ಯೋಜನೆಗಳನ್ನು ನಕಲು ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳಿನ ಸರಕುಗಳು ಈಗ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿಲ್ಲ. ಜನರು ಪ್ರಶ್ನೆ ಮಾಡಲು ಆರಂಭಿಸಿದ್ದಾರೆ. ಯೋಚಿಸಲು ಆರಂಭಿಸಿದ್ದಾರೆ. ರೈತರ ಸಾಲಮನ್ನ ಮಾಡಿದರೆ ಸರಕಾರ ದೀವಾಳಿಯಾಗುತ್ತದೆ ಎನ್ನುವ ಬಿಜೆಪಿಗರು ಕಾರ್ಪೋರೆಟ್ ಕುಳಗಳ 11 ಲಕ್ಷ ಕೋಟಿ ಸಾಲ ಮನ್ನ ಮಾಡಿರುವುದರೆ ದೇಶ ದೀವಾಳಿ ಆಗುವುದಿಲ್ಲವೇ?.” ಎಂದು ಪ್ರಶ್ನಿಸಿದರು.

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮಾತನಾಡಿ, “ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಗ್ಯಾರೆಂಟಿ ಯೋಜನೆ ಪಡೆದರೆ ಮಹಿಳೆಯರು ಹಾದಿ ತಪ್ಪುತ್ತಾರೆ ಎಂದಿದ್ದಾರೆ, ಇದು ಅತ್ಯಂತ ನಾಚಿಕೆಗೇಡಿನ ಸಂಗತಿ, ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ, ನಮ್ಮ ರಾಜ್ಯದ ಮಹಿಳೆಯರು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಹುಂಡಿಗೂ ಹಣ ಹಾಕಿದ್ದಾರೆ, ಇದರಿಂದ ಅವರ ಮನಸ್ಸಿಗೂ ನೆಮ್ಮದಿ ಸಿಕ್ಕಿದೆ. ಕುಮಾರ ಸ್ವಾಮಿಯ ಈ ಹೇಳಿಕೆಗೆ ಇದೇ ತಿಂಗಳ 26ರಂದು ತಕ್ಕ ಉತ್ತರ ನೀಡಬೇಕಾಗಿದೆ,” ಎಂದು ಕರೆ ನೀಡಿದರು.

“ಮೂಡಿಗೆರೆಯ ಕ್ಷೇತ್ರದ ಜನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಉತ್ತಮ ರೀತಿಯಲ್ಲಿ ಬೆಂಬಲ ನೀಡಿದ್ದೀರಿ. ಈ ಹಿಂದೆ ಜಯಪ್ರಕಾಶ ಹೆಗ್ಡೆ ಅವರಿಗೆ ಕಾರ್ಯನಿರ್ವಹಿಸಲು ಸಿಕ್ಕಿದ್ದು ಕೇವಲ 20 ತಿಂಗಳ ಕಾಲಾವಕಾಶ, ಆದರೂ ಅವರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕಾಗಿದೆ. ರಾಜ್ಯದ ಯೋಜನೆಗಳನ್ನು ತರಲಿಕ್ಕೆ ನನ್ನಿಂದಾದ ಪ್ರಯತ್ನ ಮಾಡುವೆ. ಅದೇ ರೀತಿ ಕೇಂದ್ರದಿಂದ ಯೋಜನೆಗಳನ್ನು ತರಲು ನಮಗೆ ಒಬ್ಬ ಸಮರ್ಥ ನಾಯಕರ ಅಗತ್ಯವಿದೆ. ಆ ಕಾರ್ಯವನ್ನು ಜಯಪ್ರಕಾಶ ಹೆಗ್ಡೆ ಅವರು ಸಮರ್ಥವಾಗಿ ನಿಭಾಯಿಸಬಲ್ಲರು. ಆದ್ದರಿಂದ ಹೆಗ್ಡೆ ಅವರನ್ನು ಆಯ್ಕೆ ಮಾಡಿ ನಮ್ಮ ಕ್ಷೇತ್ರವನ್ನು ಉತ್ತಮಪಡಿಸಿಕೊಳ್ಳಬೇಕು,” ಎಂದರು.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

5 minutes ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

21 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago