Featured

ದೇಶದಲ್ಲಿ ಹಕ್ಕಿ ಜ್ವರ ಗೆ ಮೊದಲ ಬಲಿ -Vishwanews24

ದೇಶದಲ್ಲಿ ಹಕ್ಕಿ ಜ್ವರ ಎಚ್​5ಎನ್​1 ಗೆ ಮೊದಲ ಬಲಿ -Vishwanews24

ನವದೆಹಲಿ : ದೇಶದಲ್ಲಿ ಇನ್‍ಫ್ಲುಯೆನ್ಝಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಲ್ಲಿ ಕಂಡುಬರುವ ವೈರಸ್ ಇದಾಗಿದ್ದು ಎಚ್​5ಎನ್​1 ಎಂದೂ ಕರೆಯುತ್ತಾರೆ,ಹಕ್ಕಿ ಜ್ವರ ಮನುಷ್ಯನಿಗೆ ತಗುಲುವುದು ತೀರ ಅಪರೂಪವಾಗಿದ್ದು ಆದರೆ ಎಚ್ಚರ ಅತ್ಯಗತ್ಯವಾಗಿದೆ.

ಹರ್ಯಾಣದ ಮೂಲದ 12 ವರ್ಷದ ಬಾಲಕನಲ್ಲಿ ಜುಲೈ 2ರಂದು ಎಐಐಎಂಎಸ್‍ಗೆ( ಏಮ್ಸ್) ದಾಖಲಾಗಿದ್ದ. ಮೊದಲಿಗೆ ಬಾಲಕನಿಗೆ ಕೋವಿಡ್-19 ಸೋಂಕು ತಗುಲಿರಬೇಕು ವೈದ್ಯರು ಸಂಶಯಪಟ್ಟಿದ್ದು ಪರೀಕ್ಷೆ ನಡೆಸಿದಾಗ ನೆಗೆಟಿವ್ ವರದಿ ಬಂದಿತ್ತು. ಆದರೆ ಆಳವಾದ ಸಂಶೋಧನೆ ಕೈಗೊಂಡಾಗ ಹಕ್ಕಿಜ್ವರಕ್ಕೆ ಕಾರಣವಾಗುವ ಇನ್‍ಫ್ಲುಯೆಂಜಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಜು.20ರ ಮಂಗಳವಾರ ಸಾವನ್ನಪ್ಪಿದ್ದಾನೆ.

ಹಕ್ಕಿ ಜ್ವರ ಸಾಂಕ್ರಾಮಿಕ ಆಗಿರುವ ಕಾರಣಕ್ಕೆ ಬಾಲಕನ ಸಂಪರ್ಕಕ್ಕೆ ಬಂದ ದೆಹಲಿ ಏಮ್ಸ್​​ನ ಎಲ್ಲ ಸಿಬ್ಬಂದಿಯೂ ಐಸೋಲೇಟ್​ಗೆ ಒಳಗಾಗಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಏಮ್ಸ್​ ವೈದ್ಯರೊಬ್ಬರು, ಈ ಬಾಲಕನಿಗೆ ಲ್ಯುಕೋಮಿಯಾ ಮತ್ತು ನ್ಯುಮೋನಿಯಾ ಕೂಡ ಇತ್ತು. ಆತನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬಳಿಕ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಬಾಲಕನ ಸಂಪರ್ಕಕ್ಕೆ ಬಂದ ವೈದ್ಯರು, ದಾದಿಯರು ಸೇರಿ ಎಲ್ಲರೂ ತಮ್ಮನ್ನು ತಾವು ಐಸೋಲೇಟ್​ಗೆ ಒಳಪಡಿಸಿಕೊಂಡಿದ್ದಾರೆ. ಇನ್ನೇನಾದರೂ ಅವರಲ್ಲಿ ಹಕ್ಕಿಜ್ವರದ ಯಾವುದಾದರೂ ಲಕ್ಷಣ ಕಾಣಿಸಿಕೊಂಡರೆ ಕೂಡಲೇ ಅವರಿಗೂ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಈ ವರ್ಷದ ಪ್ರಾರಂಭದಲ್ಲಿ ದೇಶಾದ್ಯಂತ ಹಲವು ಕಡೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು. ದೆಹಲಿ, ಕೇರಳ, ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಗುಜರಾತ್​, ಮಹಾರಾಷ್ಟ್ರ, ಹರ್ಯಾಣಗಳಲ್ಲಿ ಹಕ್ಕಿ ಜ್ವರದಿಂದ ಅನೇಕ ಪಕ್ಷಿಗಳು ಸಾವನ್ನಪ್ಪಿದ್ದವು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆಯನ್ನೂ ನೀಡಿತ್ತು. ಆದರೆ ಇದು ಮನುಷ್ಯನಲ್ಲಿ ಕಾಣಿಸಿಕೊಂಡ ಮೊದಲ ಪ್ರಕರಣವಾಗಿದೆ.

Vishwa News 24

Recent Posts

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

9 minutes ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

22 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

23 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

23 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

1 day ago