Featured

ದೇಶದಲ್ಲಿ ಹೊಸ ಶಕೆ ಆರಂಭ – ಇಂಡಿ ಒಕ್ಕೂಟ ಸರ್ಕಾರ ರಚಿಸುವುದು ಗ್ಯಾರಂಟಿ  : ರಾಹುಲ್‌ ಗಾಂಧಿ – vishwanews24

ದುರಹಂಕಾರ ಮತ್ತು ದಬ್ಬಾಳಿಕೆಯ ಈ ಸರಕಾರಕ್ಕೆ ಕೊನೆ ಮೊಳೆ ಹೊಡೆಯಬೇಕು   :  ರಾಹುಲ್‌ ಗಾಂಧಿ

ನವದೆಹಲಿ :  ದುರಹಂಕಾರ ಮತ್ತು ದಬ್ಬಾಳಿಕೆಯ ಪ್ರತೀಕವಾಗಿರುವ ಈ ಸರಕಾರಕ್ಕೆ ಕೊನೆ ಮೊಳೆ ಹೊಡೆಯಬೇಕು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಜನರನ್ನು ಒತ್ತಾಯಿಸಿದರು.

ಸಾರ್ವತ್ರಿಕ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಇದುವರೆಗಿನ ಟ್ರೆಂಡ್‌ಗಳ ಪ್ರಕಾರ, ವಿರೋಧ ಪಕ್ಷಗಳ ಇಂಡಿ ಒಕ್ಕೂಟ ಮುಂದಿನ ಸರ್ಕಾರವನ್ನು ರಚಿಸಲಿದೆ ಎಂದು ಗಾಂಧಿ ಹೇಳಿದ್ದಾರೆ.

ಈ ಬಿಸಿಲಿನ ಬೇಗೆಯಲ್ಲಿಯೂ ನೀವೆಲ್ಲರೂ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ಮತ ಚಲಾಯಿಸಲು ಹೊರಟಿದ್ದೀರಿ ಎಂದು ನನಗೆ ಹೆಮ್ಮೆ ಇದೆ ಎಂದು ಮಾಜಿ ಕಾಂಗ್ರೆಸ್‌‍ ಅಧ್ಯಕ್ಷರು ಹಿಂದಿಯಲ್ಲಿ ಎಕ್‌್ಸನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಅಹಂಕಾರ ಮತ್ತು ದೌರ್ಜನ್ಯದ ಪ್ರತೀಕವಾಗಿರುವ ಈ ಸರಕಾರಕ್ಕೆ ಇಂದು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಿಮ ಮತವನ್ನು ಕೊನೆ ಮೊಳೆಯನ್ನಾಗಿಸಿಕೊಳ್ಳುವಂತೆ ಅವರು ಕರೆ ನೀಡಿದ್ದಾರೆ.ಜೂನ್‌ 4 ರ ಸೂರ್ಯ, ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲು ನಿರ್ಧರಿಸಿದಾಗ, ದೇಶದಲ್ಲಿ ಹೊಸ ಶಕೆ ಆರಂಭವಾಗಲಿದೆ ಎಂದು ಗಾಂಧಿ ಹೇಳಿದರು.

ಸಂಸತ್ತಿನ ಚುನಾವಣೆಗೆ ಇದು ಕೊನೆಯ ಹಂತದ ಮತದಾನವಾಗಿದೆ ಎಂದು ಹೇಳಿರುವ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂಡಿ ಒಕ್ಕೂಟ ಸರ್ಕಾರವನ್ನು ರಚಿಸಲಿದೆ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

12 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

12 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

12 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

13 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

13 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

13 hours ago