Featured

ದೇಶದಾದ್ಯಂತ ಇಂದು 72 ನೇ ಗಣರಾಜ್ಯೋತ್ಸವ ಸಂಭ್ರಮ ; ಪ್ರಧಾನಿ ಮೋದಿ ಸೇರಿದಂತೆ ದೇಶದ ಜನತೆಗೆ ಗಣ್ಯರಿಂದ ಶುಭಾಶಯ -Vishwanews24

ದೇಶದಾದ್ಯಂತ ಇಂದು 72 ನೇ ಗಣರಾಜ್ಯೋತ್ಸವ ಸಂಭ್ರಮ ; ಪ್ರಧಾನಿ ಮೋದಿ ಸೇರಿದಂತೆ ದೇಶದ ಜನತೆಗೆ ಗಣ್ಯರಿಂದ ಶುಭಾಶಯ -Vishwanews24

ನವದೆಹಲಿ: ದೇಶದಾದ್ಯಂತ ಇಂದು ಗಣರಾಜ್ಯೋತ್ಸವ ಆಚರಣೆಯ ಸಂಭ್ರಮವಾಗಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ, ”ದೇಶವಾಸಿಗಳಿಗೆ ಗಣರಾಜ್ಯೋತ್ಸವದ ಶುಭಾಶಯಗಳು, ಜೈ ಹಿಂದ್” ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡಾ ದೇಶದ ಜನರಿಗೆ ಶುಭಾಶಯ ತಿಳಿಸಿದ್ದಾರೆ. ”ಸತ್ಯಾಗ್ರಹಿ ರೈತ-ಕಾರ್ಮಿಕರಾಗಲಿ, ಸಣ್ಣ-ಮಧ್ಯಮ ಉದ್ಯಮಿಗಳಾಗಲಿ, ಉದ್ಯೋಗವನ್ನು ಬಯಸುವ ಯುವಜನರಾಗಲಿ, ಹಣದುಬ್ಬರದಿಂದ ತೊಂದರೆಗೀಡಾದ ಗೃಹಿಣಿಯಾಗಲಿ ಭಾರತದ ಪ್ರತಿಯೊಬ್ಬ ನಾಗರಿಕನು ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ಗಣರಾಜ್ಯವು ನಿಮ್ಮಿಂದ, ಗಣರಾಜ್ಯ ನಿಮ್ಮದು” ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟ್ವೀಟ್‌ ಮಾಡಿ, ”ಗಣರಾಜ್ಯೋತ್ಸವ ಭಾರತದ ಬಹುವರ್ಣ ವೈವಿಧ್ಯತೆ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ. 1950 ರಲ್ಲಿ ನಮ್ಮ ಸಂವಿಧಾನವನ್ನು ಜಾರಿಗೆ ತಂದ ಎಲ್ಲ ಮಹಾನ್ ವ್ಯಕ್ತಿತ್ವಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ. ಭಾರತೀಯ ಗಣರಾಜ್ಯವನ್ನು ತಮ್ಮ ಶೌರ್ಯದಿಂದ ರಕ್ಷಿಸಿದ ಎಲ್ಲ ಧೈರ್ಯಶಾಲಿ ಪುರುಷರಿಗೆ ನಮಸ್ಕರಿಸುತ್ತೇನೆ” ಎಂದಿದ್ದಾರೆ.

ಇನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ”ನಾಡಿನ ಸಮಸ್ತ ಜನತೆಗೆ 72ನೇ ಗಣರಾಜ್ಯೋತ್ಸವ ದಿನದ ಹಾರ್ದಿಕ ಶುಭಾಶಯಗಳು. ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ. ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿಹಿಡಿಯೋಣ” ಎಂದು ಟ್ವೀಟಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago