Featured

ದೇಶದಾದ್ಯಂತ ವಿದೇಶಿ ವಲಸಿಗರನ್ನು ಹೊರದಬ್ಬಲು ಮೋದಿ ಸರ್ಕಾರದಿಂದ ಮಾಸ್ಟರ್ ಪ್ಲಾನ್

ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೊಂದಣಿ (ಎನ್ ಆರ್ ಸಿ) ನಡೆಸಲು ಕೇಂದ್ರ ಸರಕಾರ ಗಂಭೀರ ಚಿಂತನೆ ನಡೆಸುವ ಮೂಲಕ ಬುದ್ದಿಜೀವಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.

ರಾಷ್ಟ್ರೀಯ ಪೌರತ್ವ ನೊಂದಣಿ (ಎನ್ ಆರ್ ಸಿ) ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದ್ದು, ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಎನ್ ಆರ್ ಸಿ ಪರಿಷ್ಕೃತ ಕರಡು ಪಟ್ಟಿಯಿಂದಾಗಿ ಅಸ್ಸಾಂ ಜನರ ಪ್ರಜಾಪ್ರಭುತ್ವ ಹಕ್ಕುಗಳು ಮತ್ತು ಮಾನವ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿವೆ. 2013 ರಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶದಂತೆ ಕೇಂದ್ರ ಸರಕಾರ ಎನ್ ಆರ್ ಸಿ ಪರಿಷ್ಕರಣೆ ಮಾಡಿದೆ. ಆ ಮೂಲಕ 1951ರ ಬಳಿಕ ರಾಷ್ಟ್ರೀಯ ಪೌರತ್ವ ನೋಂದಣಿ ಪರಿಷ್ಕರಣೆಯಾಗುತ್ತಿರುವ ಮೊದಲ ರಾಜ್ಯ ಅಸ್ಸಾಂ ಆಗಿದೆಯಲ್ಲದೇ ಪರಿಷ್ಕರಣೆ ಕರಡು ಪಟ್ಟಿ ಬಿಡುಗಡೆ ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಆದರೆ 1951ರ ಜನಗಣತಿ ಬಳಿಕ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಸಿದ್ಧಪಡಿಸಲಾಗಿದ್ದು, ದೇಶದ ಪ್ರತಿ ವ್ಯಕ್ತಿಯ ಹೆಸರು, ವಯಸ್ಸು, ತಂದೆ/ಗಂಡನ ಹೆಸರು, ಮನೆ ಮುಂತಾದ ಮಾಹಿತಿಗಳು ಎನ್ ಆರ್ ಸಿಯಲ್ಲಿ ಇದೆ. ಮೊದಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇದನ್ನು ಇಡಲಾಗಿತ್ತು, ಆದರೆ 1960ರ ಬಳಿಕ ಪೊಲೀಸ್ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. 1971ರ ಮಾರ್ಚ್ 24ಕ್ಕಿಂತ ಹಿಂದಿನಿಂದಲೂ ಅಸ್ಸಾಂನಲ್ಲಿ ನೆಲೆಸಿರುವವರು ಮತ್ತು ಅವರ ಮಕ್ಕಳನ್ನು ಮಾತ್ರ ಭಾರತದ ಪೌರರು ಎಂದು ಪರಿಗಣಿಸಲಾಗುತ್ತದೆ. ಆದರೆ ಎನ್.ಆರ್.ಸಿ ಕರಡಿನ ಹಿಂದೆ ಕೇಂದ್ರ ಸರಕಾರದ ಕೈವಾಡವಿದೆ ಎಂದು ಆಕ್ಷೇಪ ತೆಗೆದು ಸಂಸತ್ ನ ಒಳಗೆ, ಹೊರಗೆ ದನಿ ಎತ್ತರಿಸಿದ್ದ ಕಾಂಗ್ರೆಸ್ ಗೆ ದಿಟ್ಟ ಉತ್ತರವನ್ನೇ ಇದೀಗ ಕೇಂದ್ರ ಸರಕಾರ ನೀಡಿದೆ.

 

“ಅಸ್ಸಾಂನಲ್ಲಿರುವ ಅಕ್ರಮ ವಲಸಿಗರನ್ನು ಗುರುತಿಸುವ ಧೈರ್ಯವನ್ನು ಕಾಂಗ್ರೆಸ್ ಸರಕಾರ ತೋರಲಿಲ್ಲ” ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇತ್ತೀಚೆಗಷ್ಟೇ ರಾಜ್ಯಸಭೆಯಲ್ಲಿ ಆರೋಪಿಸಿ ರಾಷ್ಟ್ರೀಯ ಪೌರ ನೊಂದಣಿ ಮೇಲಿನ ಚರ್ಚೆ ವೇಳೆ ಮಾತನಾಡಿದ್ದರು. ಈ ವೇಳೆ, ‘ಎನ್‍ಆರ್‍ಸಿಯು 1985ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರು ಸಹಿ ಹಾಕಿದ್ದ ಅಸ್ಸಾಂ ಒಪ್ಪಂದದ ಮುಂದುವರಿದ ರೂಪ. ಸುಪ್ರೀಂ ಕೋರ್ಟ್ ಆದೇಶದಂತೆ ಎನ್ ಆರ್ ಸಿ ಪಟ್ಟಿ ಸಿದ್ಧಪಡಿಸಲಾಗಿದೆ. ಅದರಲ್ಲಿ 40 ಲಕ್ಷ ಜನರ ಹೆಸರು ಒಳಗೊಂಡಿಲ್ಲ.

 

ಅದರಂತೆಯೇ ಇದೀಗ ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೊಂದಣಿ (ಎನ್‍ಆರ್‍ಸಿ) ನಡೆಸಲು ಕೇಂದ್ರ ಸರಕಾರ ಗಂಭೀರ ಚಿಂತನೆ ನಡೆಸಿದೆ.. ಅಧಿಕೃತ ಮತದಾರರ ಚೀಟಿ ಮತ್ತು ಇನ್ನಿತರ ಗುರುತು ಚೀಟಿ ದಾಖಲೆಗಳನ್ನು ಹೊಂದಿದವರೂ ರಾಷ್ಟ್ರೀಯ ಪೌರತ್ವ ಸಾಬೀತುಪಡಿಸಲು ಪೂರಕ ದಾಖಲೆ ಒದಗಿಸಲು ಸಾಧ್ಯವಾಗದೆ ಅಸ್ಸಾಂನಿಂದ ದೊಡ್ಡ ಸಂಖ್ಯೆಯಲ್ಲಿ ವಲಸೆ ಹೋಗಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ದೆಹಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾರ್ಮಿಕರಾಗಿ ವಲಸೆ ಹೋಗಿರುವುದಾಗಿ ಗುಪ್ತ ದಳ ಮಾಹಿತಿ ನೀಡಿದೆ. ಅಸ್ಸಾಂನಲ್ಲಿ ಎನ್ ಆರ್ ಸಿಗೆ ಎದುರಾದಂತೆ ಸಂಕೀರ್ಣ ಮತ್ತು ಸವಾಲುಗಳು ಉಳಿದ ರಾಜ್ಯಗಳಲ್ಲಿ ಎದುರಾಗುವುದಿಲ್ಲ. ಸರಕಾರ ಹೆಚ್ಚು ತೊಂದರೆ ಇಲ್ಲದೆ ಈ ಪ್ರಕ್ರಿಯೆ ನಡೆಸಬಹುದು ಎಂದು ಭದ್ರತಾ ಇಲಾಖೆ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಈಗಾಗಲೇ, ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದವರ ವಿಷಯವನ್ನು ಈಶಾನ್ಯ ರಾಜ್ಯದ ಮೂಲ ನಿವಾಸಿಗಳು ಭಾವನಾತ್ಮಕವಾಗಿ ನೋಡುತ್ತಿದ್ದು, ಈ ವಲಸಿಗರು ತಮ್ಮ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿದ್ದಾರೆಂಬ ಭಾವನೆ ಇರುವುದರಿಂದ ಎನ್ ಆರ್ ಸಿಗೆ ವಿರೋಧ ವ್ಯಕ್ತಪಡಿಸಿದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ವ್ಯತಿರಿಕ್ತವಾಗಬಹುದೆಂದು ಅಸ್ಸಾಂ ಕಾಂಗ್ರೆಸ್ ಸಮಿತಿ ಹೈಕಮಾಂಡ್ ಗೆ ವರದಿ ನೀಡಿತ್ತು.. ಆದರೆ ಕಾಂಗ್ರೆಸ್ ನ ವೋಟ್ ಬ್ಯಾಂಕನ್ನೇ ಕಿತ್ತೊಗೆಯಲು ಕೇಂದ್ರ ಸರಕಾರವು ಇದೀಗ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಸ್ಥಾಪಿಸಲು ಮುಂದಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago