ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ತಾವು ಪ್ರಚಾರ ನಡೆಸುವುದಾಗಿ ಪ್ರಿಯಾಂಕಾ ಗಾಂಧಿಯ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಭಾನುವಾರ ಹೇಳಿದ್ದಾರೆ.
‘ಅತ್ತೆ ಸೋನಿಯಾ ಗಾಂಧಿ ಹಾಗೂ ಬಾವ ರಾಹುಲ್ ಗಾಂಧಿ ಅವರು ನಾಮಪತ್ರ ಸಲ್ಲಿಸುವಾಗ ನಾನು ಅವರ ಜೊತೆಗೆ ಇರುತ್ತೇನೆ. ಇದಾದ ನಂತರ ರಾಯ್ಬರೇಲಿ ಮತ್ತು ಅಮೇಠಿ ಮಾತ್ರವಲ್ಲದೆ ದೇಶದಾದ್ಯಂತ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ’ ಎಂದು ವಾದ್ರಾ ಹೆಳಿದ್ದಾರೆ.
ರಾಹುಲ್ ಗಾಂಧಿ ಅವರು ಏಪ್ರಿಲ್ 10ರಂದು ಅಮೇಠಿ ಲೋಕಸಭಾ ಕ್ಷೇತ್ರಕ್ಕೆ ಮತ್ತು ಮರುದಿನ (ಏ.11) ಸೋನಿಯಾ ಗಾಂಧಿ ಅವರು ರಾಯ್ಬರೇಲಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.
ಕಾಂಗ್ರೆಸ್ ಅಭ್ಯರ್ಥಿಗಳ ಪರ ರಾಬರ್ಟ್ ವಾದ್ರಾ ಪ್ರಚಾರ ಕಾರ್ಯ ನಡೆಸಲು ಮುಂದಾಗಿರುವುದಕ್ಕೆ ವ್ಯಂಗ್ಯವಾಡಿರುವ ಸಚಿವೆ ಸ್ಮೃತಿ ಇರಾನಿ, ಅವರು ಎಲ್ಲಿ ಬೇಕಾದರೂ ಪ್ರಚಾರ ನಡೆಸಲಿ. ಆದರೆ ಈ ಸಂದರ್ಭದಲ್ಲಿ ಅಲ್ಲಿನ ಸುತ್ತಲಿರುವ ತಮ್ಮ ಜಮೀನುಗಳ ಬಗ್ಗೆ ಜನರು ನಿಗಾ ವಹಿಸಲಿ ಎಂದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…